Advertisement

ಇನ್ಮುಂದೆ ವೈದ್ಯರು,ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ರೆ 7ವರ್ಷ ಜೈಲು:ಸುಗ್ರೀವಾಜ್ಞೆ

08:11 AM Apr 23, 2020 | Nagendra Trasi |

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಕೋವಿಡ್ ವಿರುದ್ಧ ಹೋರಾಡುತ್ತಿರುವ ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸುವವರ ವಿರುದ್ಧ ಕಠಿಣ ಶಿಕ್ಷೆ ನೀಡಲು ಕೇಂದ್ರ ಮುಂದಾಗಿದ್ದು, ಈ ನಿಟ್ಟಿನಲ್ಲಿ 1987ರ ಸಾಂಕ್ರಾಮಿಕ ಕಾಯ್ದೆಗೆ ತಿದ್ದುಪಡಿ ತಂದು ಸುಗ್ರೀವಾಜ್ಞೆಗೆ ಅನುಮತಿ ನೀಡಿರುವುದಾಗಿ ವರದಿ ತಿಳಿಸಿದೆ.

Advertisement

ಈ ಸುಗ್ರೀವಾಜ್ಞೆಯಿಂದ ಒಂದು ವೇಳೆ ವೈದ್ಯರು ಅಥವಾ ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿ ಗಾಯಗೊಂಡರೆ ಆರೋಪಿಗೆ 6ತಿಂಗಳಿನಿಂದ 7 ವರ್ಷದವರೆಗೆ ಜೈಲುಶಿಕ್ಷೆಯಾಗಲಿದೆ. ಅಲ್ಲದೇ ಒಂದು ಲಕ್ಷ ರೂಪಾಯಿಯಿಂದ ಐದು ಲಕ್ಷ ರೂ.ವರೆಗೆ ದಂಡ ವಿಧಿಸಬಹುದಾಗಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ದೇಶದಲ್ಲಿ ಇನ್ಮುಂದೆ ಇಂತಹ ಪ್ರಕರಣಗಳನ್ನು ಕಾಂಗ್ನಿಜಬಲ್(ಸಂಜ್ಞೇಯ ಅಪರಾಧ) ಎಂದು ಪರಿಗಣಿಸಿ, ಜಾಮೀನು ರಹಿತ ಅಪರಾಧವಾಗಲಿದೆ. ಘಟನೆ ಬಗ್ಗೆ 30 ದಿನದೊಳಗೆ ಪೂರ್ಣಗೊಳಿಸಬೇಕು, ಆರೋಪಿಗೆ ಮೂರು ತಿಂಗಳಿನಿಂದ 5 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ 50 ಸಾವಿರ ರೂಪಾಯಿಯಿಂದ 2 ಲಕ್ಷ ರೂಪಾಯಿವರೆಗೆ ದಂಡ ವಿಧಿಸಬಹುದಾಗಿದೆ ಎಂದು ಹೇಳಿದರು.

ಜಾವ್ಡೇಕರ್ ಅವರ ಮಾಹಿತಿ ಪ್ರಕಾರ, ಮಾರಣಾಂತಿಕ ಕೋವಿಡ್ ಸೋಂಕಿನಿಂದ ದೇಶವನ್ನು ರಕ್ಷಿಸಲು ಯತ್ನಿಸುತ್ತಿರುವ ಆರೋಗ್ಯ ಕಾರ್ಯಕರ್ತರ ಮೇಳೆ ದುರದೃಷ್ಟ ಎಂಬಂತೆ ಹಲ್ಲೆ ಎದುರಿಸುವಂತಾಗಿದ್ದು, ಈ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ ಮೂಲಕ ಕಾಯ್ಷೆಗೆ ತಿದ್ದುಪಡಿ ತರಲಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next