Advertisement
ಚಿದಾನಂದ ಬಸಪ್ರಭು ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆ ನಿಯಮಿತ, ಚಿಕ್ಕೋಡಿ, ಮೇ| ಶಿವಶಕ್ತಿ ಶುಗರ್ಸ್ ಲಿ., ಯಡ್ರಾವ ಹಾಗೂ ಕ್ರಿಯಾಜೆನ್ ಸಂಸ್ಥೆ, ಕೃಷಿ ವಿಶ್ವವಿದ್ಯಾಲಯ ಬೆಂಗಳೂರು ಸಹಯೋಗದಲ್ಲಿ ಡಾ| ಪ್ರಭಾಕರ ಕೋರೆ, ಫಾರ್ಮ್ಹೌಸ್ನಲ್ಲಿ ಸಾವಯವ ಕಬ್ಬು ಬೆಳೆ ಕುರಿತು ಹಮ್ಮಿಕೊಂಡಿದ್ದ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.
Related Articles
Advertisement
ಚಿಕ್ಕೋಡಿ ಅರಣ್ಯ ವಲಯ ಅಧಿಕಾರಿ ಪ್ರಶಾಂತ ಗಂಗಾಧರ ಬಾಂಬೂ ಬೆಳೆ ಪದ್ಧತಿ, ಮಾರುಕಟ್ಟೆ ಲಭ್ಯತೆ ಮತ್ತು ಲಾಭಗಳ ಬಗ್ಗೆ ಮಾಹಿತಿ ನೀಡಿದರು. ಕ್ರಿಯಾಜೆನ್ ಸಂಸ್ಥೆ ಪ್ರತಿನಿಧಿ ಅವರ ಉತ್ಪನ್ನಗಳು ಹಾಗೂ ಬಳಕೆ ಬಗ್ಗೆ ಮಾಹಿತಿ ನೀಡಿದರು. ಈ ವೇಳೆ ಚಿದಾನಂದ ಬಸಪ್ರಭು ಕೋರೆ ಕಾರ್ಖಾನೆ ಉಪಾಧ್ಯಕ್ಷ ಮಲ್ಲಿಕಾರ್ಜುನ ಕೋರೆ, ನಿರ್ದೇಶಕರಾದ ಅಜೀತ್ ದೇಸಾಯಿ, ತಾತ್ಯಾಸಾಹೇಬ ಕಾಟೆ, ಬಾಳಗೌಡಾ ರೇಂದಾಳೆ, ರಾಮಚಂದ್ರ ನಿಶಾನದಾರ, ಚೇತನ ಪಾಟೀಲ, ಚಿದಾನಂದ ಬಸಪ್ರಭು ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆ ಮತ್ತು ಶಿವಶಕ್ತಿ ಶುಗರ್ಸ್ ಒಕ್ಕಲುತನ ವಿಭಾಗದ ಅಧಿಕಾರಿಗಳು, ಸಿಬ್ಬಂದಿ ಮತ್ತು ರೈತ ಸದಸ್ಯರು ಇದ್ದರು.
ಚಿದಾನಂದ ಬಸಪ್ರಭು ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆ ಕಾರ್ಮಿಕ ಕಲ್ಯಾಣಾಧಿಕಾರಿ ಎಸ್.ಎಲ್. ಹಕಾರೆ ಸ್ವಾಗತಿಸಿದರು. ವ್ಯವಸ್ಥಾಪಕ ನಿರ್ದೇಶಕ ಆರ್.ಟಿ. ದೇಸಾಯಿ ಪ್ರಾಸ್ತಾವಿಕ ಮಾತನಾಡಿದರು. ಕಬ್ಬು ಅಭಿವೃದ್ಧಿ ಅಧಿಕಾರಿ ಎನ್.ಎಸ್. ಹಿರೇಮಠ ನಿರೂಪಿಸಿದರು.
ಸ್ವಂತ 2 ಎಕರೆ ಜಮೀನಿನಲ್ಲಿ ಸಂಪೂರ್ಣ ಸಾವಯವ ಕೃಷಿ ಪದ್ಧತಿಯಲ್ಲಿ ಬೆಳೆದ ಕಬ್ಬನ್ನು ಕಂಡು ಸಂತೋಷವಾಗಿದೆ. ಹಲವು ವರ್ಷಗಳಿಂದ ರಾಸಾಯನಿಕ ಗೊಬ್ಬರ ಅವಲಂಬಿತ ಕೃಷಿ ಮಾಡುತ್ತಿರುವುದು ಹಾಗೂ ಇತ್ತೀಚಿನ ದಿನಗಳಲ್ಲಿ ರಾಸಾಯನಿಕ ಗೊಬ್ಬರದ ಅತಿಯಾದ ಬಳಕೆಯಿಂದ ಜಮೀನು, ನದಿ ನೀರು ಕಲುಷಿತಗೊಳ್ಳುತ್ತಿದೆ. ಅಲ್ಲದೇ ಅದರಿಂದ ಬೆಳೆದ ಆಹಾರ ಧಾನ್ಯ ಸೇವಿಸಿ ದೇಹಕ್ಕೆ ಹಾನಿ ಮಾಡಿಕೊಂಡು ಹಲವು ರೋಗಗಳ ಕಾರಣೀಭೂತರಾಗುತ್ತಿದ್ದೇವೆ.