Advertisement
ಪಟ್ಟಣದ ನಾದಶ್ರೀ ಕಲಾಕೇಂದ್ರದಲ್ಲಿ ಶನಿವಾರ ನಡೆದ ಉತ್ತರ ಕನ್ನಡ ಜಿಲ್ಲಾ ಬಿಜೆಪಿ ಸದಸ್ಯತ್ವ ಅಭಿಯಾನವನ್ನು ಮಾಜಿ ಸೈನಿಕ ಎನ್.ಎನ್. ಪಟಗಾರ ಜೊತೆ ಉದ್ಘಾಟಿಸಿ ಅವರು ಮಾತನಾಡಿದರು. ಈಗಾಗಲೇ ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹೊಸ ದಾಖಲೆ ನಿರ್ಮಿಸಿದೆ. ಈ ಅಭಿಯಾನದಲ್ಲಿ ಉತ್ತರಕನ್ನಡ ಜಿಲ್ಲೆಯಿಂದ 4 ಲಕ್ಷ ಜನರ ಸದಸ್ಯತ್ವ ನೋಂದಾಯಿಸುವ ಜವಬ್ದಾರಿ ನಮ್ಮಮೇಲಿದೆ. ಪಕ್ಷದ ತತ್ವ ಸಿದ್ಧಾಂತವನ್ನು ಅರಿತು, ನಾನೊಬ್ಬ ಬಿಜೆಪಿಯ ಸದಸ್ಯ ಎಂದು ಹೆಮ್ಮೆಯಿಂದ ಹೇಳುವ ಮನೋಭಾವನೆಯ ಸದಸ್ಯರು ನಮಗೆ ಬೇಕು. ಈ ಸಂಘಟನೆ ಭವಿಷ್ಯ ರಾಜಕೀಯದ ಬೆಳವಣಿಗೆಗೆ ಮುನ್ನುಡಿಯಾಗಲಿದೆ ಎಂದರು.
Related Articles
Advertisement
ಶಾಸಕಿ ರೂಪಾಲಿ ನಾಯ್ಕ ಮಾತನಾಡಿ, ಸದಸ್ಯತಾ ಅಭಿಯಾನಕ್ಕೆ ಎಲ್ಲರೂ ಕೈಜೋಡಿಸಬೇಕು. ಪಕ್ಷದ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಹೆಚ್ಚಾಗಬೇಕು. ಎಲ್ಲ ಧರ್ಮದವರನ್ನೂ ಸದಸ್ಯರನ್ನಾಗಿ ಸೇರಿಸಿಕೊಳ್ಳಬೇಕು. ಸಂಸದ ಅನಂತಕುಮಾರ ಹೆಗಡೆಯವರ ಪ್ರಾಮಾಣಿಕ ಪ್ರಯತ್ನದಿಂದ ಕಾರವಾರದಲ್ಲಿ ಸದ್ಯದಲ್ಲೇ ಬೃಹತ್ ಅಂತಾರಾಷ್ಟ್ರೀಯ ಬಂದರು ಸ್ಥಾಪನೆಯಾಗಲಿದೆ ಎಂದರು.
ಶಾಸಕ ಸುನೀಲ ನಾಯ್ಕ ಭಟ್ಕಳ ಮಾತನಾಡಿ, ರಾಜ್ಯ ಸರ್ಕಾರದಲ್ಲಿ ಬಿಜೆಪಿ ಶಾಸಕರ ಮನವಿಗಳಿಗೆ ಕವಡೆ ಕಾಸಿನ ಬೆಲೆ ಸಿಗುತ್ತಿಲ್ಲ. ನಮ್ಮ ಅರ್ಜಿ ಹಾಗೂ ಬೇಡಿಕೆಗಳನ್ನು ತಿಪ್ಪೆಗೆ ಎಸೆಯಲಾಗುತ್ತಿದೆ. ಎಲ್ಲರ ಉತ್ತಮ ಭವಿಷ್ಯಕ್ಕಾಗಿ ಸದಸ್ಯತ್ವ ಅಭಿಯಾನವನ್ನು ಯಶಸ್ವಿಗೊಳಿಸಬೇಕಿದೆ. ಈ ಸಂಘಟನೆ ಮುಂಬರುವ ತಾ.ಪಂ., ಪ.ಪಂ, ಜಿ.ಪಂ ಸೇರಿದಂತೆ ಎಲ್ಲ ಚುನಾವಣೆಗಳಿಗೂ ಸಹಕಾರಿಯಾಗಲಿದೆ ಎಂದರು.
ಮಾಜಿ ಶಾಸಕ ಸುನಿಲ ಹೆಗಡೆ ಹಳಿಯಾಳ, ರಾಜ್ಯ ವಕ್ತಾರ ಪ್ರಮೋದ ಹೆಗಡೆ ಯಲ್ಲಾಪುರ, ನಿವೃತ್ತ ಸೈನಿಕ ಎನ್.ಎನ್.ಪಟಗಾರ. ಬಿಜೆಪಿ ಮುಖಂಡ ವಿನೋದ ಪ್ರಭು, ವಿವಿಧ ತಾಲೂಕಿನ ಮಂಡಲಾಧ್ಯಕ್ಷರು, ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಲಕ್ಷ್ಮೀ ನಾರಾಯಣ ಹೆಗಡೆಕರ ವಂದೇ ಮಾತರಂ ಹಾಡಿದರು. ಪ್ರಧಾನ ಕಾರ್ಯದರ್ಶಿ ವೆಂಕಟೇಶ ನಾಯಕ ಸ್ವಾಗತಿಸಿದರು. ಎಂ.ಎಸ್. ಹೆಗಡೆ ನಿರೂಪಿಸಿದರು. ಜಿಲ್ಲಾಧ್ಯಕ್ಷ ಕೆ.ಜಿ. ನಾಯ್ಕ ಪ್ರಾಸ್ತಾವಿಕ ಮಾತನಾಡಿದರು. ಎನ್.ಎಸ್. ಹೆಗಡೆ ವಂದಿಸಿದರು.