Advertisement
ಸಂವಿಧಾನ ದಿವಸ ಆಚರಣೆ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಅತ್ಯಂತ ಶ್ರೇಷ್ಠ ಸಂವಿಧಾನ ರಚನೆ ಮಾಡಿದ್ದಾರೆ. ಶಾಸಕಾಂಗದವರು ಸಂವಿಧಾನದ ಅನುಷ್ಠಾನ ಮತ್ತು ಪರಿಣಾಮದ ಆತ್ಮಾವಲೋಕನ ಮಾಡಿಕೊಂಡು ಕೆಲಸ ಮಾಡಬೇಕು ಎಂದು ಹೇಳಿದರು.
Related Articles
Advertisement
ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ಈ ಹಿಂದೆ ಸಂವಿಧಾನ ರಚನಾ ದಿನವನ್ನು ರಾಷ್ಟ್ರೀಯ ಕಾನೂನು ದಿವಸ ಎಂದು ಆಚರಿಸಲಾಗುತ್ತಿತ್ತು. 2015ರ ಅಕ್ಟೋಬರ್ 11 ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಸ್ಮಾರಕಕ್ಕೆ ಮುಂಬೈನಲ್ಲಿ ಅಡಿಗಲ್ಲು ಹಾಕುವ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನವೆಂಬರ್ 26 ರಂದು ಪ್ರತಿ ವರ್ಷ ಸಂವಿಧಾನ ದಿವಸವನ್ನಾಗಿ ಆಚರಿಸಲು ಘೋಷಣೆ ಮಾಡಿದರು ಎಂದು ತಿಳಿಸಿದರು.
ಡಾ.ಬಿ.ಆರ್.ಅಂಬೇಡ್ಕರ್ ಅವರು ಸುದೀರ್ಘ ಕಾಲ ಚರ್ಚಿಸಿ, ಅಭಿಪ್ರಾಯಗಳನ್ನು ಸಂಗ್ರಹಿಸಿ, ಅವರ ಬಾಲ್ಯದ ಅನುಭವಗಳಿಂದ ಜಗತ್ತು ಮೆಚ್ಚುವಂತೆ ಅತ್ಯಂತ ಶ್ರೇಷ್ಠ ಸಂವಿಧಾನ ರಚನೆ ಮಾಡಿದ್ದಾರೆ. ಶಾಸಕಾಂಗದವರು ಸಂವಿಧಾನದ ಅನುಷ್ಠಾನ ಮತ್ತು ಪರಿಣಾಮದ ಆತ್ಮಾವಲೋಕನ ಮಾಡಿಕೊಂಡು ಜನರ ಹಿತಕ್ಕಾಗಿ ಕರ್ತವ್ಯ ನಿರ್ವಹಿಸಿ ಸಂವಿಧಾನದ ಆಶಯವನ್ನು ಈಡೇರಿಸಬೇಕು ಎಂದು ಹೇಳಿದರು.
ಇಂದಿನ ಯುವ ಪೀಳಿಗೆಗೆ ಸ್ವಾತಂತ್ರ್ಯ ಹೋರಾಟದ ನೆನಪು ಹಚ್ಚ ಹಸಿರಾಗಿರಬೇಕು. ನಮಗೆ ಸ್ವಾತಂತ್ರ್ಯ ಸರಳವಾಗಿ ಸಿಕ್ಕಿಲ್ಲ, ಅನೇಕ ಹಿರಿಯರ ತ್ಯಾಗ ಬಲಿದಾನದಿಂದ ಸ್ವಾತಂತ್ರ್ಯ ದೊರೆತಿದ್ದು, ಅವರ ಕೊಡುಗೆಯನ್ನು ಸ್ಮರಿಸಬೇಕು ಎಂದರು. ಇದೇ ಸಂದರ್ಭದಲ್ಲಿ ಸಂವಿಧಾನ ಪ್ರಸ್ತಾವನೆಯನ್ನು ವಾಚಿಸಿದರು.
ಗೃಹಸಚಿವ ಆರಗ ಜ್ಞಾನೇಂದ್ರ , ಪರಿಷತ್ ಕಾರ್ಯದರ್ಶಿ ಕೆ.ಆರ್. ಮಹಾಲಕ್ಷ್ಮಿ, ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಉಪಸ್ಥಿತರಿದ್ದರು.