Advertisement

ನಮ್ಮ ಸರ್ಕಾರ ಡಕೋಟಾ ಬಸ್ ಅಲ್ಲ ಶರವೇಗದ ಜೆಟ್ ವಿಮಾನ: ಸಚಿವ ಶ್ರೀರಾಮುಲು 

03:17 PM Feb 07, 2021 | Team Udayavani |

ರಾಯಚೂರು: ನಮ್ಮ ರಾಜ್ಯ ಸರ್ಕಾರ ಡಕೋಟಾ ಬಸ್ ಅಲ್ಲ. ಶರವೇಗದಲ್ಲಿ ಸಾಗುವ ಜೆಟ್ ವಿಮಾನದಂತೆ ಎಂದು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದರು. ಈ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ‘ಡಕೋಟಾ ಬಸ್’ ಹೇಳಿಕೆಗೆ ತಿರುಗೇಟು ನೀಡಿದರು.

Advertisement

ಜಿಲ್ಲೆಯ ಮಸ್ಕಿ ಕ್ಷೇತ್ರದ ವಟಗಲ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಅಭಿವೃದ್ಧಿಯಲ್ಲಿ ವೇಗವಾಗಿದೆ. ಸಿಎಂ ಬಿ.ಎಸ್. ಯಡಿಯೂರಪ್ಪನವರೇ ನಮ್ಮ ಪೈಲಟ್. ಅವರ ಜತೆ ನಾವೆಲ್ಲ ಪ್ರಯಾಣಿಸುತ್ತಿದ್ದೇವೆ. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ನಮ್ಮ ಆದ್ಯತೆ ಎಂದರು.

ಇದನ್ನೂ ಓದಿ:ಭಾರತದ ಚಹಾದ ಹೆಸರನ್ನು ಕೆಡಿಸಲು ಜಾಗತಿಕ ಮಟ್ಟದಲ್ಲಿ ಪಿತೂರಿ ನಡೆದಿದೆ: ಪ್ರಧಾನಿ ಮೋದಿ

ಮಸ್ಕಿ ಕ್ಷೇತ್ರದ ಉಪಚುನಾವಣೆ ಬಳಿಕ ಕಲ್ಯಾಣ ಕರ್ನಾಟಕ ಭಾಗಕ್ಕೆ ಎರಡು ಸಚಿವ ಸ್ಥಾನ ನೀಡುವ ಸಾಧ್ಯತೆಗಳಿವೆ. ಈ ಬಗ್ಗೆ ಸಿಎಂ ಸೂಕ್ತ ನಿರ್ಧಾರ ಕೈಗೊಳ್ಳುವರು ಎಂದು ಅವರು ಹೇಳಿದರು.

ಪಂಚಮಸಾಲಿ ಸಮಾಜವನ್ನು 2ಎಗೆ ಹಾಗೂ ಕುರುಬ ಸಮಾಜವನ್ನು ಎಸ್ ಟಿ ಗೆ ಸೇರಿಸುವ ಕುರಿತು ಅಧ್ಯಯನ ನಡೆಸಲಾಗುವುದು. ಕುಲಶಾಸ್ತ್ರ ಅಧ್ಯಯನ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಶ್ರೀರಾಮುಲು ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next