Advertisement

ಪ್ರತಿಭಟನೆ ತಾತ್ಕಾಲಿಕ ಸ್ಥಗಿತಗೊಳಿಸಿದ್ದೇವೆ ವಿನಃ, ಹಿಂಪಡೆದಿಲ್ಲ: ರಾಕೇಶ್ ಟಿಕಾಯತ್

12:50 PM Dec 15, 2021 | Team Udayavani |

ನವದೆಹಲಿ:ವಿವಿಧ ಬೇಡಿಕೆಗಳ ಈಡೇರಿಕೆ ಕುರಿತು ಕೇಂದ್ರ ಸರ್ಕಾರದ ಜತೆಗಿನ ಮಾತುಕತೆ ಪೂರ್ಣಗೊಳ್ಳುವವರೆಗೂ ನಮ್ಮ ಹೋರಾಟವನ್ನು ಕೆಲವು ಕಾಲದವರೆಗೆ ಸ್ಥಗಿತಗೊಳಿಸಿದ್ದೇವೆಯೇ ವಿನಃ, ಪೂರ್ಣ ಪ್ರಮಾಣದಲ್ಲಿ ಹಿಂಪಡೆಯಲಿಲ್ಲ ಎಂದು ಭಾರತೀಯ ಕಿಸಾನ್ ಒಕ್ಕೂಟದ ಮುಖಂಡ ರಾಕೇಶ್ ಟಿಕಾಯತ್ ಬುಧವಾರ(ಡಿಸೆಂಬರ್ 15) ತಿಳಿಸಿದ್ದಾರೆ.

Advertisement

ಇದನ್ನೂ ಓದಿ:ಅಲ್ಪಸಂಖ್ಯಾತರ ರಕ್ಷಣೆಗಾಗಿ ಮತಾಂತರ ನಿಷೇಧ ಕಾಯ್ದೆ ಜಾರಿ : ಸಿ.ಟಿ.ರವಿ

ನಮ್ಮ ಹೋರಾಟಕ್ಕೆ ಕೈಜೋಡಿಸಿದ ಪ್ರತಿಯೊಬ್ಬರಿಗೂ ನಾನು ಈ ಸಂದರ್ಭದಲ್ಲಿ ಧನ್ಯವಾದ ಅರ್ಪಿಸುತ್ತೇವೆ. ಅಲ್ಲದೇ ಅಗತ್ಯ ವಸ್ತುಗಳನ್ನು ಸರಬರಾಜು ಮಾಡುತ್ತಿದ್ದ ಗ್ರಾಮಸ್ಥರು, ಸಾರ್ವಜನಿಕರಿಗೂ ಅಭಿನಂದನೆ ಸಲ್ಲಿಸುವುದಾಗಿ ಟಿಕಾಯತ್ ಹೇಳಿದರು.

ಕೇಂದ್ರ ಸರ್ಕಾರ ಹಿಂಪಡೆದಿರುವ ಮೂರು ಕೃಷಿ ಕಾಯ್ದೆಗೆ ಸಂಬಂಧಿಸಿದಂತೆ ಸರ್ಕಾರದ ಜತೆ ಮಾತುಕತೆ ಮುಂದುವರಿದಿದೆ. ನಮ್ಮ ಹೋರಾಟ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ, ಆದರೆ ಹಿಂಪಡೆಯಲಿಲ್ಲ ಎಂದು ಟಿಕಾಯತ್ ತಿಳಿಸಿದರು.

ಕೇಂದ್ರದ ಕೃಷಿ ಕಾಯ್ದೆಯನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿ ಕಳೆದ ಒಂದು ವರ್ಷದಿಂದ ಉತ್ತರಪ್ರದೇಶ, ದೆಹಲಿ ಗಡಿಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರು ಇದೀಗ ಹೋರಾಟವನ್ನು ಸ್ಥಗಿತಗೊಳಿಸಿ ತಮ್ಮ ಮನೆಗಳಿಗೆ ವಾಪಸ್ ಆಗುತ್ತಿರುವ ಹಿನ್ನೆಲೆಯಲ್ಲಿ ಟಿಕಾಯತ್ ಈ ಪ್ರತಿಕ್ರಿಯೆ ನೀಡಿರುವುದಾಗಿ ವರದಿ ತಿಳಿಸಿದೆ.

Advertisement

ದೆಹಲಿ-ಹರ್ಯಾಣ ಗಡಿ ಭಾಗದಲ್ಲಿ ರೈತರು ಶನಿವಾರದಿಂದ ಪ್ರತಿಭಟನಾ ಸ್ಥಳದಿಂದ ನಿರ್ಗಮಿಸಲು ಆರಂಭಿಸಲಿದ್ದಾರೆ. ಬುಧವಾರ ಬೆಳಗ್ಗೆ ಗಾಜಿಪುರ ಗಡಿಯಿಂದ ರೈತರು ನಿರ್ಗಮಿಸಲಿದ್ದಾರೆ. ಆದರೆ ಕೆಲವು ಮಂದಿ ಪ್ರತಿಭಟನಾಕಾರರು ಮಾತ್ರ ಅಲ್ಲಿರುವುದಾಗಿ ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next