Advertisement

Politics: ನಮ್ಮದೇ ಗೆಲುವು… ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಣಯ

12:06 AM Sep 18, 2023 | Team Udayavani |

ಹೈದರಾಬಾದ್‌: ದೇಶದ ಜನ ಬದಲಾವಣೆ ಬಯಸುತ್ತಿದ್ದು, ಐದು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ನಮ್ಮದೇ ಗೆಲುವಾಗಲಿದೆ. ಇದಕ್ಕಾಗಿ ಸಂಘಟಿತರಾಗಿ ಶ್ರಮಿಸೋಣ ಎಂದು ಕಾಂಗ್ರೆಸ್‌ ಕಾರ್ಯಕಾರಿಣಿ ಸಭೆ ನಿರ್ಣಯ ತೆಗೆದುಕೊಂಡಿದೆ.

Advertisement

ಎರಡು ದಿನಗಳ ಕಾಲ ನಡೆದ ಪಕ್ಷದ ಕಾರ್ಯಕಾರಿ ಸಭೆಯಲ್ಲಿ ತೆಲಂಗಾಣ ಸಹಿತ ಪಂಚ ರಾಜ್ಯಗಳ ಚುನಾವಣೆ ಕುರಿತು ಸುದೀರ್ಘ‌ ಚರ್ಚೆ ನಡೆಯಿತು. ಭಿನ್ನಾಭಿಪ್ರಾಯಗಳನ್ನು ಮರೆತು ಪಕ್ಷದ ಗೆಲುವಿಗೆ ಶ್ರಮಿಸೋಣ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದರು. ಜತೆಗೆ 2024ರಲ್ಲಿ ಕೇಂದ್ರದಲ್ಲಿರುವ ಸರ್ವಾಧಿಕಾರಿ ಸರಕಾರವನ್ನೂ ಕಿತ್ತೂಗೆಯಲು ಸಂಕಲ್ಪ ಮಾಡೋಣ ಎಂದರು. ಸೋನಿಯಾ ಗಾಂಧಿ ಮಾತನಾಡಿ, ಭಿನ್ನಾಭಿಪ್ರಾಯಗಳನ್ನು ಮಾಧ್ಯಮಗಳ ಮುಂದೆ ಇರಿಸಿ ಕಾಂಗ್ರೆಸ್‌ನ ಹಿತಾಸಕ್ತಿಗೆ ವಿರುದ್ಧವಾಗಿ ಕೆಲಸ ಮಾಡಬೇಡಿ ಎಂದು ಕಿವಿಮಾತು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next