Advertisement

ನಮ್ಮದು ನೈತಿಕ ಸರ್ಕಾರ: ಯಡಿಯೂರಪ್ಪ

11:28 PM Mar 02, 2020 | Team Udayavani |

ವಿಧಾನಸಭೆ: “ನಮ್ಮದು ಅನೈತಿಕ ಸರ್ಕಾರವಲ್ಲ, ನೈತಿಕ ಸರ್ಕಾರ’ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸಮರ್ಥಿಸಿಕೊಂಡಿದ್ದಾರೆ. ರಾಜ್ಯಪಾಲರ ಭಾಷಣಕ್ಕೆ ವಂದನೆ ಸಲ್ಲಿಸುವ ನಿರ್ಣಯದ ಮೇಲಿನ ಚರ್ಚೆಗೆ ಸರ್ಕಾರದ ಪರವಾಗಿ ಉತ್ತರ ನೀಡುವ ಸಂದರ್ಭದಲ್ಲಿ, ಪ್ರಜಾಪ್ರಭುತ್ವದಲ್ಲಿ ಸಂಖ್ಯೆಗಳೇ ಮುಖ್ಯ. ಈ ಸಂಖ್ಯೆ ಮೇಲಾಟದಲ್ಲಿ ನಮ್ಮ ಪಕ್ಷ ಗೆದ್ದಿದೆ ಎಂದು ಹೇಳಿದರು.

Advertisement

ರಾಜ್ಯಪಾಲರ ಭಾಷಣದ ಮೇಲೆ ಮಾತನಾಡುವಾಗ ರಾಜಕೀಯ ಮಾತನಾಡುವುದು ನನಗೆ ಇಷ್ಟವಿಲ್ಲ. ಆದರೆ, ವಿರೋಧಪಕ್ಷದವರು ನಮ್ಮ ಸರ್ಕಾರದ ಬಗ್ಗೆ ಟೀಕೆ ಮಾಡಿದ್ದಾರೆ. ಅದಕ್ಕೆ ಉತ್ತರ ಕೊಡಲೇಬೇಕು. ಒಂದೆರಡು ಮಾತುಗಳನ್ನು ರಾಜಕೀಯವಾಗಿ ಹೇಳಲೇಬೇಕು ಎಂದ ಯಡಿಯೂರಪ್ಪ ಅವರು, ಉಪ ಚುನಾವಣೆಯಲ್ಲಿ 15 ರಲ್ಲಿ 12 ಸ್ಥಾನಗಳನ್ನು ಗೆದ್ದು ಜನರ ಬೆಂಬಲ ನಮ್ಮ ಪಕ್ಷಕ್ಕೆ ಇದೆ ಎಂದು ಸಾಬೀತು ಮಾಡಿದ್ದೇವೆ. ಈ 12 ಸ್ಥಾನಗಳಲ್ಲಿ ಗೆಲುವು ನಮ್ಮ ಸರ್ಕಾರದ ಮತ್ತು ಪಕ್ಷದ ನೈತಿಕ ಗೆಲುವಾಗಿದೆ.

ನಿಮಗೆ ಗೊತ್ತಿರಲಿ, ರಾಜ್ಯದ ಜನತೆ ಸಂಪೂರ್ಣವಾಗಿ ನಮ್ಮ ಜೊತೆಗೆ ಇದ್ದಾರೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ನಿಮ್ಮ ಪಕ್ಷ ಗೆದ್ದದ್ದು ಒಂದು ಸ್ಥಾನ. ನಾವು ಗೆದ್ದದ್ದು 25 ಮತ್ತು ಮತ್ತೂಂದು. ನಿಮ್ಮ ಟೀಕೆ ಜನರ ಅಭಿಮತವನ್ನು ಅಪಹಾಸ್ಯ ಮಾಡಿ ದಂತಾಗುತ್ತದೆ. ಇದರಿಂದ ಜನ ನಿಮ್ಮ ಬಗ್ಗೆ ಹಗುರವಾಗಿ ಮಾತನಾಡಲು ಪ್ರಾರಂಭಿಸುತ್ತಾರೆ. ಆದರಿಂದ ನನಗೆ ನಿಮ್ಮ ಬಗ್ಗೆ ಕಾಳಜಿಯಿಂದ ಈ ಸಲಹೆ ಕೊಡುತ್ತಿದ್ದೇನೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next