Advertisement

ಅಂಬೇಡ್ಕರ್‌ ಭಾವಚಿತ್ರ ಹಾಕಿಸದ ಅಧಿಕಾರಿಗಳ ವಿರುದ್ಧ ಆಕ್ರೋಶ

11:17 AM Jan 27, 2022 | Team Udayavani |

ಲಿಂಗಸುಗೂರು: ತಾಲೂಕು ಆಡಳಿತ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದ ವೇದಿಕೆ ಬ್ಯಾನರ್‌ ನಲ್ಲಿ ಸಂವಿಧಾನ ಶಿಲ್ಪಿ ಡಾ| ಬಿ.ಆರ್‌. ಅಂಬೇಡ್ಕರ್‌ ಭಾವಚಿತ್ರ ಹಾಕಿಸುವಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ದಲಿತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

Advertisement

ಗಣರಾಜ್ಯೋತ್ಸವ ಸಂದರ್ಭದಲ್ಲಿ ಅಂಬೇಡ್ಕರ್‌ ಭಾವಚಿತ್ರ ಹಾಕಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಈ ವರ್ಷವೂ ಕೂಡಾ ಅಂಬೇಡ್ಕರ್‌ ಭಾವಚಿತ್ರ ಹಾಕಿಸದೇ ಬ್ಯಾನರ್‌ ಪ್ರಿಂಟ್‌ ಮಾಡಿಸಿದ್ದಾರೆ. ನಿರ್ಲಕ್ಷ್ಯ ಧೋರಣೆ ಅನುಸರಿಸುವ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಆಗ್ರಹಿಸಿದರು.

ಈ ವೇಳೆ ಶಾಸಕ ಡಿ.ಎಸ್‌.ಹೂಲಗೇರಿ ಅವರು ಅಧಿಕಾರಿಗಳು ಮಾಡಿದ ತಪ್ಪಿಗೆ ನಾನು ಕ್ಷಮೆಯಾಚಿಸುವೆ. ಮುಂದೆ ಈ ರೀತಿಯಾಗದಂತೆ ನೋಡಿಕೊಳ್ಳುವೆ ಎಂದು ಭರವಸೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next