Advertisement

ಅಕ್ಷರ ದಾಸೋಹ ನೌಕರರ ಆಕ್ರೋಶ

09:54 AM Feb 03, 2019 | Team Udayavani |

ಗದಗ: ಮಧ್ಯಂತರ ಮುಂಗಡ ಪತ್ರದಲ್ಲಿ ಅಕ್ಷರ ದಾಸೋಹ ನೌಕರರನ್ನು ಕಡೆಗಣಿಸಿರುವುದನ್ನು ಖಂಡಿಸಿ ನಗರದ ಗಾಂಧಿ ವೃತ್ತದಲ್ಲಿ ಸಿಐಟಿಯು ಸಂಯೋಜಿತ ಅಕ್ಷರ ದಾಸೋಹ ನೌಕರರ ಸಂಘದ ಕಾರ್ಯಕರ್ತೆಯರು ಕೇಂದ್ರ ಸರ್ಕಾರದ ಪ್ರತಿಕೃತಿ ದಹಿಸಿ ಪ್ರತಿಭಟಿಸಿದರು.

Advertisement

ಸಿಐಟಿಯು ಮುಖಂಡ ಮಾರುತಿ ಚಿಟಗಿ ನೇತೃತ್ವದಲ್ಲಿ ಶನಿವಾರ ಇಲ್ಲಿನ ಗಾಂಧಿ ಸರ್ಕಲ್‌ನಲ್ಲಿ ಜಮಾಯಿಸಿದ ಅಕ್ಷರ ದಾಸೋಹ ಕಾರ್ಯಕರ್ತೆಯರು, ಕೇಂದ್ರ ಸರಕಾರ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿದರು. ಬಳಿಕ ಮಾನವ ಸರಪಳಿ ನಿರ್ಮಿಸಿ ಕೆಲಕಾಲ ಪ್ರತಿಭಟನೆ ನಡೆಸಿದರು.

ಅಕ್ಷರ ದಾಸೋಹ ನೌಕರರ ಗೌರವ ಧನವನ್ನು ಹೆಚ್ಚಿಸಬೇಕು. ಕನಿಷ್ಠ ವೇತನ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಹಲವು ಬಾರಿ ಪ್ರತಿಭಟನೆ ನಡೆಸಿದ್ದರೂ ಆಳುವ ಸರಕಾರಗಳು ಸ್ಪಂದಿಸುತ್ತಿಲ್ಲ. ಈ ಕೂಡಲೇ ಕೇಂದ್ರ ಸರಕಾರ ಎಚ್ಚೆತ್ತುಕೊಂಡು ಅಕ್ಷರ ದಾಸೋಹ ನೌಕರರಿಗೆ ಕನಿಷ್ಠ ವೇತನ ನಿಗದಿಗೊಳಿಸಬೇಕು. ಇಲ್ಲವಾದರೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸಾರ್ವಜನಿಕರು ಮೋದಿ ಸರಕಾರಕ್ಕೆ ತಕ್ಕ ಪಾಠ ಕಲಿಸುವರು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next