Advertisement

Bhavani Revanna ವಿರುದ್ಧ ಜಾಲತಾಣದಲ್ಲಿ ಆಕ್ರೋಶ

11:58 PM Dec 04, 2023 | Team Udayavani |

ಮೈಸೂರು: ದ್ವಿಚಕ್ರ ವಾಹನದಲ್ಲಿ ಬಂದು ತಮ್ಮ ಕಾರಿಗೆ ಢಿಕ್ಕಿ ಹೊಡೆದ ವ್ಯಕ್ತಿಯನ್ನು ಜೆಡಿಎಸ್‌ ನಾಯಕಿ ಭವಾನಿ ರೇವಣ್ಣ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡು ತ್ತಿದ್ದು, ಭವಾನಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಭವಾನಿ ಅವರು ಐಷಾರಾಮಿ ಕಾರಿನಲ್ಲಿ ಹೊಳೆನರಸೀಪುರಕ್ಕೆ ಪ್ರಯಾಣಿಸುತ್ತಿದ್ದಾಗ ರಾಂಪುರ ಗ್ರಾಮದ ಗೇಟ್‌ ಬಳಿ ದ್ವಿಚಕ್ರ ವಾಹ ನ ವೊಂದು ಕಾರಿಗೆ ಢಿಕ್ಕಿ ಹೊಡೆದಿದೆ.

Advertisement

ಇದರಿಂದ ಕೆಂಡಾಮಂಡಲವಾದ ಭವಾನಿ, “ಸುಟ್ಟಾಕ್ರೊ ಈ ಗಾಡಿನ’ ಎಂದು ರೇಗಾಡಿದ್ದಾರೆ. ಈ ವೇಳೆ ದ್ವಿಚಕ್ರ ವಾಹನ ಸವಾರನ ಪರ ವಾಗಿ ಮಧ್ಯಪ್ರವೇಶಿಸಿದ ಸ್ಥಳೀಯರ ವಿರುದ್ಧ ಹರಿಹಾಯ್ದಿದ್ದಾರೆ. “ಕಾರಿಗೆ ಡ್ಯಾಮೇಜ್‌ ಆಗಿದೆ. ಹಣ ನೀವು ಕೊಡ್ತೀರಾ, 5 ಲಕ್ಷ ರಿಪೇರಿ ಮಾಡಿಸು ವು ದಕ್ಕೆ ಹಣ ಕೊಡಂಗಿದ್ರೆ ನ್ಯಾಯ ಮಾತಾಡಲು ಬನ್ನಿ’ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ನೆಟ್ಟಿಗರ ಆಕ್ರೋಶ
ಮಾಜಿ ಪ್ರಧಾನಿಗಳ ಸೊಸೆ, ಮಾಜಿ ಸಚಿವ ಹಾಗೂ ಹಾಲಿ ಶಾಸಕರ ಪತ್ನಿ, ಮಾಜಿ ಮುಖ್ಯ ಮಂತ್ರಿಗಳ ಅತ್ತಿಗೆ ಗಾಯಾಳು ಬೈಕ್‌ ಸವಾರನ ಮೇಲೆ ನಡೆದುಕೊಂಡ ರೀತಿಗೆ ನೆಟ್ಟಿಗರು ತೀವ್ರ ಆಕ್ಷೇ ಪ ವ್ಯಕ್ತಪಡಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next