Advertisement

ಹೆಚ್ಚಿನ ದರದಲ್ಲಿ ರಸಗೊಬ್ಬರ ಮಾರಾಟಕ್ಕೆ ಆಕ್ರೋಶ

05:57 PM Jul 23, 2022 | Shwetha M |

ವಿಜಯಪುರ: ಜಿಲ್ಲೆಯಲ್ಲಿ ಬಿತ್ತನೆ ಬೀಜ, ಗೊಬ್ಬರ ಬೆಲೆ ಹೆಚ್ಚಿನ ದರಕ್ಕೆ ಮಾರಾಟ ಮಾಡುವುದನ್ನು ನಿಯಂತ್ರಿಸಬೇಕು ಎಂದು ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

Advertisement

ಶುಕ್ರವಾರ ಜಿಲ್ಲಾಧಿಕಾರಿ ಡಾ| ವಿ.ಬಿ.ದಾನಮ್ಮನವರ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಸಂಘಟನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ, ಜಿಲ್ಲೆಯಲ್ಲಿ ಬಿತ್ತನೆ ಬೀಜ ಹಾಗೂ ಗೊಬ್ಬರ ಬೆಲೆ ಗಗನಕ್ಕೆ ಏರಿಸಲಾಗಿದೆ. ವ್ಯಾಪಾರಿಗಳು ಸರ್ಕಾರ ನಿಗದಿ ಮಾಡಿರುವ ದರಕ್ಕೆ ಬದಲಾಗಿ ಪ್ರತಿ ಚೀಲ ಡಿಎಪಿಗೆ 1800 ರೂ. ಮಾರಾಟ ಮಾಡಲಾಗುತ್ತದೆ. ಯುರಿಯಾ ಗೊಬ್ಬರವನ್ನು 266ರೂ. ಹೆಚ್ಚು ದರಕ್ಕೆ ಮಾರಲಾಗುತ್ತಿದೆ. ಇದರಿಂದ ರೈತರು ಅನ್ಯಾಯವಾಗಿ ಹೆಚ್ಚಿನ ದರಕ್ಕೆ ರಸಗೊಬ್ಬರ ಖರೀದಿಸುವ ದುಸ್ಥಿತಿ ನಿರ್ಮಾಣವಾಗಿದೆ ಎಂದು ವಿವರಿಸಿದರು.

ಮಳೆ ಹಾಗೂ ಬಿತ್ತನೆ ಸಂದರ್ಭದಲ್ಲಿ ರೈತರ ಒತ್ತಡದ ಸಮಯ ದುರ್ಬಳಕೆ ಮಾಡಿಕೊಳ್ಳಲು ಮುಂದಾಗಿರುವ ಗೊಬ್ಬರ ವ್ಯಾಪಾರಿಗಳು, ಸರ್ಕಾರ ನಿಗದಿ ಮಾಡಿದ ದರಕ್ಕಿಂತ ಮನಸ್ಸಿಗೆ ಬಂದ ದರಕ್ಕೆ ರಸಗೊಬ್ಬರ ಮಾರಾಟ ಮಾಡುತ್ತಿದ್ದಾರೆ. ಕನಿಷ್ಟ ಪ್ರತಿ ಚೀಲ ರಸಗೊಬ್ಬರಕ್ಕೆ 150-200 ರೂ. ಹೆಚ್ಚಿನ ದರ ಪಡೆಯುತಿದ್ದಾರೆ ಎಂದು ಕಿಡಿ ಕಾರಿದರು.

ಈಗಾಗಲೇ ರೈತರು ಮಳೆ ಇಲ್ಲದೇ ಬರಗಾಲದಿಂದ ತತ್ತರಿಸಿದ್ದಾರೆ. ಮತ್ತೂಂದೆಡೆ ಬೆಳೆ ಹಾನಿಯಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾನೆ. ಇಂಥ ಸಂದರ್ಭದಲ್ಲಿ ಸರ್ಕಾರ ಬಿತ್ತನೆ ಬೀಜ ಗೊಬ್ಬರ ಹೆಚ್ಚಿಗೆ ಮಾಡಿದ ರೀತಿ ರೈತರು ಬೆಳೆದ ಬೆಳೆಗಳಿಗೆ ತಕ್ಕ ಬೆಲೆಯನ್ನೂ ನೀಡತ್ತಿಲ್ಲ. ಇಂಥ ದುಸ್ಥಿತಿಯ ಪರಿಸ್ಥಿತಿಯಲ್ಲಿ ಅಕ್ರಮವಾಗಿ ಹೆಚ್ಚಿನ ದರಕ್ಕೆ ರಸಗೊಬ್ಬರ ಖರೀದಿಸುವ ಸಂಕಷ್ಟ ಎದುರಾಗಿದೆ. ಕೂಡಲೇ ಜಿಲ್ಲಾಡಳಿತ ಈ ಅನ್ಯಾಯದ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇದಲ್ಲದೇ ಜಮೀನಿಗೆ ಬೀಜ ಬಿತ್ತನೆ ಮಾಡುವ ಹಂತದಿಂದ ಬೆಳೆ ಕಟಾವಾಗಿ ರೈತನ ಮನೆ ಸೇರುವವರೆಗೆ ರೈತ ಎದುರಿಸುವ ಸಂಕಷ್ಟಗಳು, ಆರ್ಥಿಕ ಸಮಸ್ಯೆ ಅಷ್ಟಿಷ್ಟಲ್ಲ. ಹೀಗಾಗಿ ಬಿತ್ತನೆಯಿಂದ ಕಟಾವಿನವರೆಗೆ ಕೃಷಿಗೆ ತಗಲುವ ಎಲ್ಲ ಖರ್ಚು-ವೆಚ್ಚಗಳನ್ನು ಪರಿಗಣಿಸಿ ಸರ್ಕಾರ ಎಲ್ಲ ಬೆಳೆಗಳಿಗೆ ಬೆಲೆ ನಿಗದಿ ಮಾಡಬೇಕು ಎಂದು ಆಗ್ರಹಿಸಿದರು.

Advertisement

ರೈತ ಮುಖಂಡ ಹೊನಕೇರಪ್ಪ ತೆಲಗಿ ಮಾತನಾಡಿ, ರೈತ ಕುಲ ಉಳಿವಿಗಾಗಿ ಡಾ| ಎಂ.ಎಸ್‌. ಸ್ವಾಮಿನಾಥನ್‌ ವರದಿಯನ್ನು ಸರ್ಕಾರ ಜಾರಿಗೆ ತರಬೇಕು. ಇದರಿಂದ ರೈತರ ಆತ್ಮಹತ್ಯೆ ತಡೆಗಟ್ಟಲು ಸಾಧ್ಯವಿದೆ. ಆದ್ದರಿಂದ ಶೀಘ್ರದಲ್ಲಿ ಕ್ರಮ ಕೈಗೊಳ್ಳಬೇಕು. ಸರ್ಕಾರ ನಿಗಪಡಿಸಿದ ದರ ಪಟ್ಟಿಯನ್ನು ಪ್ರತಿಗೊಬ್ಬರ ಅಂಗಡಿ ಮುಂದೆ ದರಗಳ ಫಲಕ ಹಾಕಬೇಕು ಎಂದು ಆಗ್ರಹಿಸಿದರು. ಬಾಲಪ್ಪಗೌಡ ಲಿಂಗದಳ್ಳಿ, ಸಂಗನಗೌಡ ಕೊಳುರ, ಶೇಖಪ್ಪ ಕರಾಬಿ, ಬಾಲಪ್ಪಗೌಡ ಲಿಂಗದಳ್ಳಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next