Advertisement

ಹರ್ಯಾಣ ಮಾದರಿ ನಿಯಮ ರೂಪಿಸಿ

07:21 PM Oct 05, 2020 | Suhan S |

ಚಿತ್ರದುರ್ಗ: ಹರ್ಯಾಣ ರಾಜ್ಯದ ಮಾದರಿಯಲ್ಲಿ ನಿಯಮ ರೂಪಿಸಿ ಎಲ್ಲಾ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರಿಗೆ ವೇತನ ಶ್ರೇಣಿ ಹಾಗೂ ವೇತನ ಭತ್ಯೆ ನೀಡಿ ಸಮಾನ ನೌಕರರಿಗೆ ಸಮಾನ ವೇತನ ನೀಡಬೇಕು ಎಂದು ಒತ್ತಾಯಿಸಿ ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್‌ಎಚ್‌ಎಂ) ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಭಾನುವಾರ ನಗರದ ಜಿಲ್ಲಾಧಿ ಕಾರಿ ಕಚೇರಿ ಎದುರು ಧರಣಿ ನಡೆಸಿದರು.

Advertisement

ಹೊರಗುತ್ತಿಗೆಯಲ್ಲಿ ಕೆಲಸ ಮಾಡುವ ನೌಕರರಿಗೆ ಮಧ್ಯವರ್ತಿಗಳಿಲ್ಲದೆ ನೇರವಾಗಿ ವೇತನ ಜಾರಿ ಮಾಡ ಬೇಕು. ಒಳಗುತ್ತಿಗೆ ನೌಕರರಿಗೆ ಇರುವ ಸೌಲಭ್ಯಗಳನ್ನು ಒದಗಿಸಬೇಕು. ಆರೋಗ್ಯ ಭಾಗ್ಯ ಯೋಜನೆಯನ್ನು ಎಲ್ಲಾ ನೌಕರರಿಗೆ ವಿಸ್ತರಿಸಬೇಕು. ಕೇಂದ್ರ ಸರ್ಕಾರ ನೀಡುವ ಬೋನಸ್‌ ಹೆಚ್ಚಳ ಪ್ರಕ್ರಿಯೆ ಆರಂಭಿಸಿ ಎಂದು ಒತ್ತಾಯಿಸಿದರು. ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಒದಗಿಸಿ, ಎನ್‌ ಎಚ್‌ಎಂ ಸೇರಿದಂತೆ ಎಲ್ಲಾ ಹುದ್ದೆ ಗಳನ್ನು ಖಾಯಾಂ ಮಾಡಿಕೊಳ್ಳಬೇಕು. ಮುಷ್ಕರದ ಸಂದರ್ಭದಲ್ಲಿತಡೆಹಿಡಿದಿರುವ ವೇತನ ಪಾವತಿಸ ಬೇಕು. ನೌಕರರಿಗೆ ಕಲ್ಯಾಣ ಮಂಡಳಿ ಸ್ಥಾಪಿಸಬೇಕು ಎಂದು ಆಗ್ರಹಿಸಿದರು.

ಪರಸ್ಪರ, ಸಾಮಾನ್ಯ ಹಾಗೂ ಖಾಲಿ ಇರುವ ಸ್ಥಳಗಳಿಗೆ ವರ್ಗಾವಣೆ ಮಾಡಲು ಅವಕಾಶ ಕಲ್ಪಿಸಬೇಕು. ಕಾಯಂ ಹುದ್ದೆಗೆ ನೇಮಕವಾದ ನಂತರ ಅಲ್ಲಿದ್ದವರನ್ನು ಬೇರೆಡೆ ವರ್ಗಾವಣೆ ಮಾಡುವುದನ್ನು ನಿಲ್ಲಿಸಬೇಕು. ಕಾಯಂ ನೌಕರರಿಗೆ ನೀಡುವಂತೆ ಹೊರಗುತ್ತಿಗೆ ನೌಕರರಿಗೂ ಸಾವು, ಅಂಗವೈಕಲ್ಯ ಮತ್ತಿತರ ಸಂದರ್ಭಗಳಲ್ಲಿ ಸೂಕ್ತ ಪರಿಹಾರ ಒದಗಿಸಬೇಕು. ಸಣ್ಣಪುಟ್ಟ ಕಾರಣಗಳಿಗೆಕೆಲಸದಿಂದ ತೆಗೆಯುವ ಅನಾಗರಿಕ ಪದ್ಧತಿಯನ್ನು ಕೈ ಬಿಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸಬೇಕು ಎಂದು ಒತ್ತಾಯಿಸಿದರು. ಎಲ್ಲಾ ಬೇಡಿಕೆಗಳು ಈಡೇರುವವರೆಗೆ ಯಾವುದೇ ಒತ್ತಡ ಬಂದರೂ ಕೆಲಸಕ್ಕೆ ಹಾಜರಾಗುವುದಿಲ್ಲ. ಬದಲಾಗಿ ಪ್ರತಿ ದಿನ ಒಂದು ತಾಸು ಮುಷ್ಕರ ನಡೆಸುತ್ತೇವೆ ಎಂದು ತಿಳಿಸಿದರು.

ಜಿಲ್ಲಾ ಸಂಘಟನಾ ಕಾರ್ಯದರ್ಶಿ ಡಾ| ರುದ್ರೇಶ್‌, ಉಪಾಧ್ಯಕ್ಷ ಡಾ| ಮಹೇಂದ್ರಕುಮಾರ್‌ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next