Advertisement
ಸುಮಾರು 2 ದಶಕಗಳ ಹಿಂದೆ ನಿರ್ಮಾಣ ವಾದ ಈ ಮುಳುಗು ಸೇತುವೆಯು ಸ್ಥಳೀಯರಿಗೆ ಮಳೆಗಾಲದಲ್ಲಿ ಸಂಚರಿಸಲು ಏಕೈಕ ರಸ್ತೆಯಾಗಿದೆ. ಘಟ್ಟ ಪ್ರದೇಶದಲ್ಲಿ ಸುರಿದ ಭಾರೀ ಮಳೆಗೆ ಪ್ರವಾಹ ಬಂದು ಮುಳುಗು ಸೇತುವೆ ಕುಸಿತಗೊಂಡಿದೆ. ಈ ಭಾಗದಲ್ಲಿ ಇನ್ನೂ ಒಂದೆರಡು ತಿಂಗಳು ಭಾರೀ ಮಳೆಯಾಗುವುದರಿಂದ ಮುಳುಗು ಸೇತುವೆ ಸಂಪೂರ್ಣ ಕೊಚ್ಚಿ ಹೋಗುವ ಆತಂಕ ಸ್ಥಳಿಯರದ್ದು. ಆಯರಬೆಟ್ಟು, ಪೈತಾಳ ದರ್ಖಾಸು, ಪರಿಶಿಷ್ಟ ಪಂಗಡ ಕಾಲನಿ, ಪಕ್ಕಿಬೈಲು ಶಾಲೆಗೆ ಹೋಗುವ ವಿದ್ಯಾರ್ಥಿಗಳಿಗೆ ಮುಳುಗು ಸೇತುವೆ ಕುಸಿತದಿಂದ ಸಮಸ್ಯೆ ಎದುರಾಗಿದೆ.
Related Articles
ಮುಳುಗು ಸೇತುವೆಗೆ ಮುಕ್ತಿಗೊಳಿಸಿ ವಿಶಾಲ ಸೇತುವೆ ನಿರ್ಮಿಸುವಂತೆ ಕಳೆದ 5- 6 ವರ್ಷಗಳಿಂದ ಸ್ಥಳೀಯರು
ಜನಪ್ರತಿನಿಧಿಗಳಿಗೆ, ಇಲಾಖಾ ಅಧಿಕಾರಿಗಳಿಗೆ ಮನವಿ ಮಾಡುತ್ತಾ ಬಂದಿದ್ದರೂ ಸೇತುವೆ ನಿಮಾಣಗೊಂಡಿಲ್ಲ. 2 ವರ್ಷಗಳ ಹಿಂದೆ ಮೋರಿ ಅಳವಡಿಸಿ ಮುಳುಗು ಸೇತುವೆಯ ಎತ್ತರ ಏರಿಸುವ ಯೋಜನೆ ರೂಪಿಸಲಾಗಿತ್ತು ಆದರೆ ಇದು ತಾತ್ಕಾಲಿಕ ವ್ಯವಸ್ಥೆಯಾಗಿರುದನ್ನು ಮನಗಂಡ ಸ್ಥಳೀಯರು ವಿಶಾಲ ಸೇತುವೆಗೆ ಬೇಡಿಕೆ ಇಟ್ಟಿದ್ದರು.
Advertisement
ಹಲವು ಅವಘಡಮಳೆಗಾಲ ಪ್ರಾರಂಭಗೊಂಡ ಕೂಡಲೇ ಈ ಪ್ರದೇಶದಲ್ಲಿ ಪ್ರತಿ ನಿತ್ಯ ನೆರೆ ಬಂದು ಮುಳುಗು ಸೇತುವೆ ಮುಳುಗುವುದರಿಂದ ಅವಘಡ ನಿರಂತರವಾಗುತ್ತಿದೆ. ಕಳೆದ ಒಂದು ವಾರದ ಅವಧಿಯಲ್ಲಿ 2 ಅವಘಡಗಳು ನಡೆದಿವೆ. ಸ್ಥಳೀಯ ವಿದ್ಯಾರ್ಥಿನಿಯೋರ್ವಳು ಸೇತುವೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ತಡೆಗೋಡೆ ಇಲ್ಲದೆ ನದಿಗೆ ಬಿದ್ದು ಕೊಚ್ಚಿಕೊಂಡು ಹೋಗುತ್ತಿದ್ದಾಗ ರಿûಾಚಾಲಕರೋರ್ವರು ಗಮನಿಸಿ ರಕ್ಷಿಸಿದ್ದರು. ಇನ್ನೊಂದು ಪ್ರಕರಣದಲ್ಲಿ ಸೇತುವೆಯ ಮೇಲೆ ರಾತ್ರಿ ವೇಳೆ ನೀರು ಹರಿಯುತ್ತಿರುವುದು ಗಮನಕ್ಕೆ ಬಾರದೆ ಬೈಕ್ ಸವಾರರು ಬೈಕ್ ಸಹಿತ ಕೊಚ್ಚಿಕೊಂಡು ಹೋಗಿದ್ದರು ಸಹ ಅಪಾಯದಿಂದ ಪಾರಾಗಿದ್ದರು. ಶಾಶ್ವತ ಸೇತುವೆ ನಿರ್ಮಾಣಕ್ಕೆ
ಅಂದಾಜುಪಟ್ಟಿ
ಈಗಾಗಲೇ ಸ್ಥಳ ಪರಿಶೀಲನೆ ನಡೆಸಲಾಗಿದ್ದು ಅತ್ಯವಶ್ಯಕವಾಗಿರುವ ಆಯರಬೆಟ್ಟು ಮುಳುಗು ಸೇತುವೆಯನ್ನು ತೆರವುಗೊಳಿಸಿ ಶಾಶ್ವತ ಸೇತುವೆ ನಿರ್ಮಾಣಕ್ಕೆ ಸುಮಾರು 40ಲಕ್ಷ ರೂ ವೆಚ್ಚ ತಗಲಬಹುದು. ಈ ಬಗ್ಗೆ ಅಂದಾಜು ಪಟ್ಟಿ ತಯಾರಿಸಿ ಜಿಲ್ಲಾಧಿಕಾರಿಯವರಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು.
– ಸದಾನಂದ ನಾಯಕ್
ಸಹಾಯಕ ಇಂಜಿನಿಯರ್ ಪಂಚಾಯತ್ ರಾಜ್ ಎಂಜಿನಿಯರಿಂಗ್ ಉಪ ವಿಭಾಗ ಕಾರ್ಕಳ