Advertisement

ಸರ್ಕಾರಿ ಕಾಲೇಜಲ್ಲಿ 100ಕ್ಕೂ ಅಧಿಕ ಮೊಬೈಲ್‌ ವಶ

09:30 AM Jul 23, 2017 | Team Udayavani |

ಸಾಗರ: ಕಾಲೇಜು ವಿದ್ಯಾರ್ಥಿ ಸಾಮಾಜಿಕ ಜಾಲತಾಣದಲ್ಲಿ ಟಿಪ್ಪು ಸುಲ್ತಾನ್‌ ಭಾವಚಿತ್ರವನ್ನು ಅವಹೇಳನಕಾರಿಯಾಗಿ ಚಿತ್ರಿಸಿದ ಕಾರಣ ಉಂಟಾದ ಗಲಭೆಯ ಹಿನ್ನೆಲೆಯಲ್ಲಿ ಶನಿವಾರ ಪೊಲೀಸರು ನಗರದ ಸರ್ಕಾರಿ ಪಪೂ ಕಾಲೇಜಿಗೆ ಭೇಟಿ ನೀಡಿ ಪರಿಶೀಲಿಸಿದರು.

Advertisement

ಪ್ರತಿ ತರಗತಿಗೆ ತೆರಳಿ ತಪಾಸಣೆ ನಡೆಸಿದ ಪೊಲೀಸರು ವಿದ್ಯಾರ್ಥಿಗಳ ಬಳಿ ಇದ್ದ 100ಕ್ಕೂ ಹೆಚ್ಚು ಮೊಬೈಲ್‌ಗ‌ಳನ್ನು ವಶಕ್ಕೆ ಪಡೆದು, ಪ್ರಾಚಾರ್ಯರಿಗೆ ಹಸ್ತಾಂತರಿಸಿದರು. ಕಾಲೇಜಲ್ಲಿ ಮೊಬೈಲ್  ಬಳಸುವಂತಿಲ್ಲ ಎಂಬ ಆದೇಶವಿದ್ದರೂ ವಿದ್ಯಾರ್ಥಿಗಳು ಮೊಬೈಲ್‌ ಬಳಸುತ್ತಿದ್ದಾರೆ. ಹೀಗಾಗಿ ಮೊಬೈಲ್‌ ವಶಕ್ಕೆ ಪಡೆಯಲಾಗಿದೆ. ಪೋಷಕರ ಸಹಿ ಪಡೆದು ವಿದ್ಯಾರ್ಥಿಗಳಿಗೆ ಮೊಬೈಲ್‌ ಹಿಂದಿರುಗಿಸುವಂತೆ ಪ್ರಾಚಾರ್ಯರಿಗೆ ತಿಳಿಸಲಾಗಿದೆ ಎಂದು ನಗರ ಠಾಣೆ ಸಿಪಿಐ ಬಿ.ಎಲ್‌.ಜನಾರ್ದನ ಹೇಳಿದರು. ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಚಿತ್ರ ಮತ್ತು ಸಂದೇಶ ಹಾಕಿ ಅನಗತ್ಯವಾಗಿ ಗೊಂದಲ ಸೃಷ್ಟಿಸುವ ವಿದ್ಯಾರ್ಥಿಗಳ ವಿರುದಟಛಿ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next