Advertisement

ಕುಷ್ಟಗಿ: ಕಳಪೆ ಉಪಹಾರ ಸೇವಿಸಿ 30 ಕ್ಕೂ ವಿದ್ಯಾರ್ಥಿಗಳು ಅಸ್ವಸ್ಥ

02:51 PM Nov 28, 2021 | Team Udayavani |

ಕುಷ್ಟಗಿ (ಕೊಪ್ಪಳ): ಕುಷ್ಟಗಿ ತಾಲೂಕಿನ ನಿಡಶೇಸಿ ಮೊರಾರ್ಜಿ ವಸತಿ ನಿಲಯದಲ್ಲಿ ಕಳಪೆ ಉಪಹಾರ ಸೇವಿಸಿ 30ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದರಿಂದ ಆತಂಕ ಸೃಷ್ಟಿಸಿದೆ.

Advertisement

ನಿಡಶೇಸಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 250 ವಿದ್ಯಾರ್ಥಿಗಳಿದ್ದಾರೆ. ಕಳೆದ ರಾತ್ರಿ ಅನ್ನ ಸಾರು ಸೇವಿಸಿದ್ದು, ಬೆಳಗ್ಗೆ ಇಡ್ಲಿ ಉಪಹಾರ ಸೇವಿಸಿದ್ದು ಕೆಲ ಹೊತ್ತಿನಲ್ಲಿ ತಲೆಸುತ್ತು ಶುರುವಾಗಿದೆ. ಕೂಡಲೇ ಇಡ್ಲಿ ಉಪಹಾರ ಬದಲಿಸಿ ಪಲಾವ್ ಅಡುಗೆ ತಯಾರಿಸಲು ಮುಂದಾದಾಗ 2 ತಾಸು ಹಿಡಿಯಿತು. ಆಗ ಬೆಳಗಿನ ಉಪಹಾರ ವಿಳಂಬವಾಗಿದ್ದರಿಂದ ಉಳಿದೆಲ್ಲ ವಿದ್ಯಾರ್ಥಿಗಳು ಒಬ್ಬರಿಂದ ಒಬ್ಬರಿಗೆ ಸಮೂಹ ಸನ್ನಿಗೆ ಒಳಗಾಗಿ ಗಾಬರಿಗೊಂಡಿರುವುದು ಕಂಡು ಬಂತು.   ಆತಂಕಗೊಂಡಿದ್ದ ವಿದ್ಯಾರ್ಥಿಗಳು ಕೂಡಲೇ  ಅಲ್ಲಿನ ಸಿಬ್ಬಂದಿಯ ಗಮನಕ್ಕೆ ತಂದರು. ಕೂಡಲೇ ಆರೋಗ್ಯ ಇಲಾಖೆ ಗಮನಕ್ಕೆ ತಂದು ಅಸ್ವಸ್ಥಗೊಂಡ 30 ವಿದ್ಯಾರ್ಥಿಗಳನ್ನು ಮೊದಲ ಹಂತವಾಗಿ ಕುಷ್ಟಗಿ ಸರ್ಕಾರಿ ಆಸ್ಪತ್ರೆಯ ದಾಖಲಿಸಿ ಚಿಕಿತ್ಸೆ ನೀಡಿದರು. ನಂತರ ಎಲ್ಲಾ ವಿದ್ಯಾರ್ಥಿಗಳನ್ನು  ಆಸ್ಪತ್ರೆಗೆ ದಾಖಲಿಸಿದರು.

ವಿದ್ಯಾರ್ಥಿಗಳಿಗೆ ಸಕಾಲಿಕ ಚಿಕಿತ್ಸೆ ಸಿಕ್ಕಿದ್ದರಿಂದ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ. ವಸತಿ ನಿಲಯದಲ್ಲಿ ವಾರ್ಡನ್ ಇಲ್ಲದಿರುವ ಹಿನ್ನೆಲೆಯಲ್ಲಿ ಪ್ರಾಚಾರ್ಯ ವಿಜಯಕುಮಾರ ದೊಡ್ಡಮನಿ ಅವರೇ ವಹಿಸಿಕೊಂಡಿದ್ದರು.

ಈ ಹಿನ್ನೆಲೆಯಲ್ಲಿ ತಾಲೂಕಾ ವೈದ್ಯಾಧಿಕಾರಿ ಡಾ. ಅನಂದ ಗೋಟೂರು, ತಹಶೀಲ್ದಾರ ಎಂ.ಸಿದ್ದೇಶ ಭೇಟಿ ನೀಡಿ ವಿದ್ಯಾರ್ಥಿ ಸೇವಿಸಿದ್ದ ಅಹಾರ ಮಾದರಿ ಸಂಗ್ರಹಿಸಿದ್ದಾರೆ.

ವಿಧಾನ ಪರಿಷತ್ ಚುನಾವಣೆ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಅವರು, ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ಅವರು, ಕಳಪೆ ಆಹಾರ ಸೇವನೆ ಹಾಗೂ ವಿದ್ಯಾರ್ಥಿಗಳು ಗಾಬರಿಗೊಂಡು, ಸಮೂಹ ಸನ್ನಿಗೆ ಒಳಗಾಗಿದ್ದು ಆತಂಕ ಪಡುವುದು ಅಗತ್ಯವಿಲ್ಲ. ಈ ಪ್ರಕರಣದಲ್ಲಿ ನಿಷ್ಕಾಳಜಿ ತೋರಿದ ಸಿಬ್ಬಂದಿ ಮೇಲೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗೆ ಸೂಚನೆ ನೀಡುವುದಾಗಿ ತಿಳಿಸಿದರು.

Advertisement

ಇದೇ ಸಂದರ್ಭದಲ್ಲಿ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ, ಮಾಜಿ ಜಿ.ಪಂ. ಸದಸ್ಯ ಕೆ.ಮಹೇಶ ಮತ್ತೀತರರು ಭೇಟಿ ನೀಡಿ ವಿದ್ಯಾರ್ಥಿಗಳ ಯೋಗಕ್ಷೇಮ ವಿಚಾರಿಸಿದರು.

ಮೊರಾರ್ಜಿ ದೇಸಾಯಿ ವಸತಿ ಶಾಲೆ ಯ ಪ್ರಾಚಾರ್ಯ ವಿಜಯಕುಮಾರ ದೊಡ್ಡಮನಿ ಪ್ರತಿಕ್ರಿಯಿಸಿ ಬೆಳಗಿನ ಉಪಹಾರ ವಿಳಂಬವಾಗಿದ್ದರಿಂದ ಈ ರೀತಿಯಾಗಿದೆ ಎಂದು ಸ್ಪಷ್ಟಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next