Advertisement

ಬೆಂಗಳೂರು: ನಾಲ್ವರು ಪಾದಚಾರಿಗಳಿಗೆ ಗುದ್ದಿದ ಕಾರು; ಓರ್ವ ಬಲಿ

04:30 PM May 20, 2022 | Team Udayavani |

ಬೆಂಗಳೂರು : ನಗರದ ಕತ್ರಿಗುಪ್ಪೆ ಜಂಕ್ಷನ್ ಬಳಿ ಅತೀವೇಗದಲ್ಲಿ ಬಂದ ಕಾರೊಂದು ಪಾದಚಾರಿಗಳಿಗೆ ಗುದ್ದಿದ ಪರಿಣಾಮ ಓರ್ವ ಸಾವನ್ನಪ್ಪಿ , ಮೂವರು ಗಂಭೀರವಾಗಿ ಗಾಯಗೊಂಡ ಅವಘಡ ಶುಕ್ರವಾರ ಬೆಳ್ಳಂಬೆಳಗ್ಗೆ  ನಡೆದಿದೆ.

Advertisement

ಅಪಘಾತಕ್ಕೀಡಾದ  ಪಾದಚಾರಿ ಸುರೇಶ್ (28) ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಉಳಿದ ಮೂವರು ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುತ್ತಾರೆ.

ಬೆಳಗ್ಗೆ 7.20 ರ ವೇಳೆ ಕತ್ರಿಗುಪ್ಪೆ ಜಂಕ್ಷನ್ ಕಡೆಯಿಂದ ಇಟ್ಟಮಡು ಜಂಕ್ಷನ್ ಕಡೆಗೆ ಮುಕೇಶ್ ಎಂಬಾತ ಕಾರನ್ನು ವೇಗವಾಗಿ ಮತ್ತು ನಿರ್ಲಕ್ಷತೆಯಿಂದ ಚಾಲನೆ ಮಾಡಿಕೊಂಡು ಹೋಗುತ್ತಿದ್ದ ವೇಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಚಿನ್, ಶೀವರಾಜು, ಸುರೇಶ್ ಮತ್ತು ಶೈಲೇಂದ್ರ ಎಂಬ 4 ಜನ ಪಾದಚಾರಿಗಳಿಗೆ ಢಿಕ್ಕಿ ಹೊಡೆದಿದ್ದಾನೆ. ಢಿಕ್ಕಿಯ ರಭಸಕ್ಕೆ ನಾಲ್ವರೂ ಗಾಳಿಯಲ್ಲಿ ಹಾರಿ ರಸ್ತೆಗೆ ಅಪ್ಪಳಿಸಿದ್ದಾರೆ.

ಬಳಿಕ ಕಾರು ಫುಟ್ಪಾತ್ ಮೇಲೆ ನಿಂತಿದ್ದ ಒಂದು ಕಾರು ಮತ್ತು ಎರಡು ದ್ವಿಚಕ್ರ ವಾಹನಗಳಿಗೆ ಢಿಕ್ಕಿಯಾಗಿದ್ದು ವಾಹನಗಳು ಜಂಖಗೊಂಡಿವೆ.

ಕಾರು ಚಾಲಕ ಮುಕೇಶ್ ನನ್ನ ಪಶ್ಚಿಮ ಸಂಚಾರಿ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next