Advertisement

ಪದ್ಮನಾಭನಗರ ಕ್ಷೇತ್ರದಲ್ಲಿ ಆಕ್ಸಿಜನ್ ಕಾನ್ಸಂಟ್ರೇಟರ್ ಬ್ಯಾಂಕ್ ಉದ್ಘಾಟನೆ

07:51 PM May 22, 2021 | Team Udayavani |

ಬೆಂಗಳೂರು : ಆಕ್ಸಿಜನ್ ಅಭಾವ ನೀಗಿಸುವ ನಿಟ್ಟಿನಲ್ಲಿ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿನ ಶಾಸಕರ ಕಚೇರಿಯಲ್ಲಿ ಆಕ್ಸಿಜನ್ ಕಾನ್ಸಂಟ್ರೇಟರ್ ಗಳ ಬ್ಯಾಂಕ್‍ನ್ನು ಕಂದಾಯ ಸಚಿವ ಹಾಗೂ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಶಾಸಕ ಆರ್ ಅಶೋಕ್ ಉದ್ಘಾಟನೆ ಮಾಡಿದರು.

Advertisement

ಕ್ಷೇತ್ರದ ನಿವಾಸಿಗಳಿಗೆ ಅನುಕೂಲವಾಗಲೆಂದು ಕೈಗೊಳ್ಳಲಾದ ಈ ಸೌಲಭ್ಯವು ಅತ್ಯಧಿಕವಾಗಿ ನೆರವಾಗಲಿದೆ ಎಂದು ಸಚಿವರು ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಎನ್. ಲಕ್ಷ್ಮೀಕಾಂತ, ಕಬ್ಬಾಳು ಉಮೇಶ್, ಆಂಜನಪ್ಪ ಮತ್ತು ಪದ್ಮನಾಭನಗರ ಮಂಡಲ ಪ್ರಧಾನ ಕಾರ್ಯದರ್ಶಿ ವಿಜಯ್ ಉಪಸ್ಥಿತರಿದ್ದರು.

ಇದನ್ನೂ ಓದಿ :ಶಿವಮೊಗ್ಗ : ಚಾನಲ್ ಗೆ ಹಾರಿ ಕೋವಿಡ್ ಸೋಂಕಿತ ವ್ಯಕ್ತಿ ಆತ್ಮಹತ್ಯೆ

ನಂತರದಲ್ಲಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಕೆಲಸ ಮಾಡುತ್ತಿರುವ ನರ್ಸ್ ಗಳು , ಭದ್ರತಾ ಸಿಬ್ಬಂದಿಗಳು ಹಾಗೂ ಸ್ವಚ್ಚತಾ ಕೆಲಸ ಮಾಡುವ ವಾರಿಯರ್ಸ್‍ ಗಳಿಗೆ 300 ಕ್ಕೂ ಅಧಿಕ ರೇಷನ್ ಕಿಟ್‍ಗಳನ್ನು ಸಚಿವರು ವಿತರಣೆ ಮಾಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next