Advertisement

ಪೊಲಿಪು : ತುರ್ತುಚಿಕಿತ್ಸೆಗೆ ಆಕ್ಸಿಜನ್ ಸಿಲಿಂಡರ್ ಲೋಕಾರ್ಪಣೆ

08:37 PM May 11, 2021 | Team Udayavani |

ಕಾಪು: ಕಾಪು ಪೊಲಿಪು ಖುವ್ವತ್ತುಲ್ ಇಸ್ಲಾಂ ಯಂಗ್ಮೆನ್ಸ್ ಅಸೋಸಿಯೇಶನ್ ವತಿಯಿಂದ ಗಲ್ಫ್ ಸಮಿತಿ ಯ ಸಹಕಾರದೊಂದಿಗೆ ಪೊಲಿಪು ಜಮಾಅತ್ ವ್ಯಾಪ್ತಿಯ ಹಾಗೂ ಪುರಸಭೆಯ ಸ್ಥಳೀಯ ವಾರ್ಡ್‌ ನ ನಾಗರಿಕರ ತುರ್ತುಚಿಕಿತ್ಸೆಗೆ ಉಚಿತವಾಗಿ ನೀಡಲು ಆಕ್ಸಿಜನ್ ಸಿಲಿಂಡರನ್ನು ಸಂಸ್ಥೆಯ ಕಛೇರಿಯಲ್ಲಿ ಲೋಕಾರ್ಪಣೆಗೊಳಿಸಲಾಯಿತು.

Advertisement

ಕಾಪು ಪೊಲಿಪು ಮೊಹಲ್ಲಾದ ಖಾಝಿ ಪಿ.ಬಿ.ಅಹಮದ್ ಮುಸ್ಲಿಯಾರ್ ದುಆದೊಂದಿಗೆ ಈ ಕಾರ್ಯಕ್ಕೆ ಚಾಲನೆ ನೀಡಲಾಯಿತು.

ಕಾಪು ಪ್ರಾಥಮಿಕ ಆರೋಗ್ಯ ಕೆಂದ್ರದ ವೈದ್ಯಾಧಿಕಾರಿ ಡಾ.ಸುಬ್ರಾಯ ಕಾಮತ್ ಹಾಗೂ ಕಾಪು ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪನಿರೀಕ್ಷಕ ಗೋಪಾಲ ಶೆಟ್ಟಿಗಾರ್ ಮುಖ್ಯ ಅತಿಥಿಗಳಾಗಿದ್ದರು.

ಇದನ್ನೂ ಓದಿ :ಕೋವಿಡ್ 2ನೇ ಅಲೆಯಿಂದ ಅರ್ಥ ವ್ಯವಸ್ಥೆಗೆ ಹೆಚ್ಚು ಪ್ರತಿಕೂಲ ಪರಿಣಾಮವಿಲ್ಲ

ಸಂಸ್ಥೆಯ ಅಧ್ಯಕ್ಷ ಬಶೀರ್ ಜನಪ್ರಿಯ ಅಧ್ಯಕ್ಷತೆ ವಹಿಸಿದ್ದರು. ಸ್ಥಳೀಯ ಖತೀಬ್ ಇರ್ಷಾದ್ ಸಅದಿ, ಸಂಸ್ಥೆಯ ಮಾಜಿ ಅಧ್ಯಕ್ಷ ಅಕ್ರಂ ಗುಡ್ವಿಲ್, ಸಲಹೆಗಾರರಾದ ಕೆ.ಎಂ.ರಝಾಕ್, ಉಪಾಧ್ಯಕ್ಷ ಅಶ್ರಫ್ ಮತ್ರಿ, ಕಾರ್ಯದರ್ಶಿ ಜಲೀಲ್, ಕೋಶಾಧಿಕಾರಿ ಅಬ್ದುಲ್ ಅಝೀಝ್ ಮೊದಲಾದವರು ಉಪಸ್ಥಿತರಿದ್ದರು.‌

Advertisement

Advertisement

Udayavani is now on Telegram. Click here to join our channel and stay updated with the latest news.

Next