Advertisement

ಇಂದಿನಿಂದ ಆಮ್ಲಜನಕ ಎಕ್ಸ್‌ಪ್ರೆಸ್‌ : ಕೊರತೆ ನೀಗಿಸಲು ರೈಲ್ವೇ ಇಲಾಖೆ ಕ್ರಮ

01:12 AM Apr 19, 2021 | Team Udayavani |

ಹೊಸದಿಲ್ಲಿ: ದೇಶಾದ್ಯಂತ ವೈದ್ಯಕೀಯ ಆಮ್ಲಜನಕ ಕೊರತೆ ಆಗದಂತೆ ನೋಡಿಕೊಳ್ಳುವುದಕ್ಕಾಗಿ ರೈಲ್ವೇ ಇಲಾಖೆ ಮಹತ್ವದ ಹೆಜ್ಜೆ ಇರಿಸಿದ್ದು, ಆಮ್ಲಜನಕ ಎಕ್ಸ್‌ಪ್ರೆಸ್‌ ರೈಲು ಓಡಿಸಲು ಮುಂದಾಗಿದೆ. ಈ ಬಗ್ಗೆ ರೈಲ್ವೇ ಸಚಿವ ಪೀಯೂಷ್‌ ಗೋಯಲ್‌ ರವಿವಾರ ಟ್ವೀಟ್‌ ಮೂಲಕ ಮಾಹಿತಿ ನೀಡಿದ್ದಾರೆ. ಇದರಿಂದಾಗಿ ಆಸ್ಪತ್ರೆಗಳಿಗೆ ಕ್ಷಿಪ್ರ ವಾಗಿ ಆಮ್ಲಜನಕ ಲಭ್ಯ ವಾಗಲಿದೆ ಎಂದು ಅವರು ಹೇಳಿದ್ದಾರೆ.

Advertisement

ದ್ರವರೂಪದ ವೈದ್ಯಕೀಯ ಆಮ್ಲಜನಕ ಮತ್ತು ಆಮ್ಲಜನಕದ ಸಿಲಿಂಡರ್‌ಗಳನ್ನು ಈ ವಿಶೇಷ ರೈಲುಗಳಲ್ಲಿ ಕಳುಹಿಸಲಾಗುತ್ತದೆ. ಸೋಮವಾರದಿಂದ ಮುಂಬಯಿಯ ಕಲಂಬೋಲಿ ಮತ್ತು ಬೊಯಿಸಾರ್‌ ನಿಲ್ದಾಣಗಳಿಂದ ವಿಶಾಖಪಟ್ಟಣ, ಜಮ್ಶೆಡ್‌ಪುರ, ರೂರ್ಕೆಲಾ ಮತ್ತು ಬೊಕಾರೋಗಳಿಗೆ ಈ ವಿಶೇಷ ರೈಲುಗಳು ತೆರಳಲಿವೆ.

ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರ ಸರಕಾರಗಳು ರೈಲುಗಳ ಮೂಲಕ ವೈದ್ಯಕೀಯ ಆಮ್ಲಜನಕ ಪೂರೈಸಲು ಮನವಿ ಮಾಡಿದ್ದವು. ರವಿವಾರ ಸಭೆ ನಡೆಸಿ ವಿಶೇಷ ರೈಲು ಓಡಿಸಲು ನಿರ್ಧರಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next