Advertisement

ಆಮ್ಲಜನಕ ಪ್ಲ್ಯಾಂಟ್‌ ಹೊಂದಿದ ಜಿಲ್ಲೆ

08:59 PM Aug 23, 2021 | Team Udayavani |

ಮಂಡ್ಯ: ಕಳೆದ ಒಂದೂವರೆ ವರ್ಷದಿಂದ ಜಿಲ್ಲೆಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಾಗಿನಿಂದಲೂ ಆಸ್ಪತ್ರೆಗಳ ಪರಿಸ್ಥಿತಿ ಕೊಂಚ ಬದಲಾಗಿದೆ. ಕೊರೊನಾ ಸೋಂಕಿನಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ಆಮ್ಲಜನಕ ಪ್ಲಾಂಟ್‌ ಹೊಂದಿದ ಜಿಲ್ಲೆಯಾಗಿದೆ  .

Advertisement

ಬೆಡ್‌, ಐಸಿಯು, ವೆಂಟಿಲೇಟರ್‌ಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ಆದರೆಇನ್ನೂ ಸಾಕಷ್ಟು ಸಮಸ್ಯೆಗಳಿದ್ದು, ಮೂಲಭೂತ ಸೌಕರ್ಯಗಳಿಗೆ ಒತ್ತು ನೀಡಬೇಕಿದೆ.ಬೆಡ್‌ಗಳ ಸಂಖ್ಯೆ ಹೆಚ್ಚಳ: ತಾಲೂಕಿನ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಐಸಿಯು ಬೆಡ್‌ಗಳಹೆಚ್ಚಿಸಲು ಕ್ರಮ ವಹಿಸಲಾಗಿದೆ. ಮೊದಲು3 ಐಸಿಯು ಬೆಡ್‌ಗಳಿ ದ್ದವು. ಈಗ ಅದನ್ನು10ಕ್ಕೇರಿಸಲು ಕ್ರಮ ವಹಿಸಲಾಗು ತ್ತಿದೆ. ಅಲ್ಲದೆ, ವೆಂಟಿಲೇಟರ್‌ಗಳನ್ನು ಅಳವಡಿಸಲುಕ್ರಮ ವಹಿಸಲಾಗುತ್ತಿದೆ.ಮಿಮ್ಸ್‌ಗೆ 100 ವೆಂಟಿಲೇಟರ್‌ಗಳಿಗೆ ಏರಿಕೆ:ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ 40 ವೆಂಟಿಲೇಟರ್‌ಗಳಿಂದ 100 ವೆಂಟಿಲೇಟರ್‌ಗಳಿಗೆ ಏರಿಕೆ ಮಾಡಲಾಗಿದೆ.

ಅದರ ಜತೆಗೆ 30ಮಕ್ಕಳ ಐಸಿಯು ಬೆಡ್‌ ಅಳವಡಿಸಲಾಗಿದೆ. ಜಿಲ್ಲೆಯಾಸ್ಪತ್ರೆಯಲ್ಲಿ ಕೋವಿಡ್‌ಗೆ ಸಂಬಂಧಿಸಿದಂತೆ 400 ಹಾಸಿಗೆಗಳನ್ನು ಮೀಸಲಿಡಲಾಗಿತ್ತು. ಮತ್ತೆ 150 ಬೆಡ್‌ಗಳ ವಾರ್ಡ್‌ತೆರೆಯಲಾಗಿದೆ.ಸಿಸಿಟಿವಿ ಕ್ಯಾಮೆರಾ ಅಳವಡಿಕೆ: ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್‌ ವಾರ್ಡ್‌ಗಳಲ್ಲಿಕೊರೊನಾ ಸೋಂಕಿತರ ಮೇಲೆ ನಿಗಾ ವಹಿಸಲು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಇದರಿಂದ ಸೋಂಕಿತರಿಗೆ ಯಾವ ಸಂದರ್ಭದಲ್ಲಿ ಚಿಕಿತ್ಸೆ ನೀಡಬಹುದು.ಅಲ್ಲದೆ, ಸೋಂಕಿತರ ಆರೋಗ್ಯದ ಮೇಲೆ ನಿಗಾ ವಹಿಸಬಹುದಾಗಿದೆ.

ಆಕ್ಸಿಜನ್‌ ಉತ್ಪಾದನಾ ಪ್ಲಾಂಟ್‌ಗಳ ನಿರ್ಮಾಣ: ಮಂಡ್ಯ ಮಿಮ್ಸ್‌ ಸೇರಿದಂತೆಜಿಲ್ಲೆಯ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್‌ ಪ್ಲಾಂಟ್‌ ನಿರ್ಮಾಣ ಮಾಡ ಲಾಗಿದೆ.2ನೇ ಅಲೆಯಲ್ಲಿ ಆಕ್ಸಿಜನ್‌ ಕೊರತೆ ಅನು ಭವಿಸಿದ ಹಿನ್ನೆಲೆಯಲ್ಲಿ ಮುಂದೆ ಯಾವುದೇರೀತಿಯ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಮಿಮ್ಸ್‌ನಲ್ಲಿ 2 ಸೇರಿದಂತೆಎಲ್ಲ ತಾಲೂಕು ಆಸ್ಪತ್ರೆ ಗಳಲ್ಲಿ ಆಕ್ಸಿಜನ್‌ ಪ್ಲಾಂಟ್‌ ನಿರ್ಮಿಸಲಾಗಿದೆ.

ವೈದ್ಯಕೀಯ ಹುದ್ದೆಗಳ ಭರ್ತಿ: ಜಿಲ್ಲೆಯಲ್ಲಿ ಖಾಲಿ ಇದ್ದ ಎಲ್ಲ ವೈದ್ಯಕೀಯಹುದ್ದೆಗಳನ್ನು ಭರ್ತಿ ಮಾಡ ಲಾಗಿದೆ. ವೈದ್ಯರು, ದಾದಿಯರು, ಡಿ ಗ್ರೂಪ್‌ ನೌಕ ‌ರರು,ಸಿಬ್ಬಂದಿಗಳು, ಲ್ಯಾಬ್‌ ಟೆಕ್ನಿಷಿಯನ್‌, ಫಾರ್ಮಾಸಿಸ್ಟ್‌ಗಳನ್ನು ಗುತ್ತಿಗೆ ಆಧಾರದ ಮೇಲೆನೇಮಕ ಮಾಡಿಕೊಳ್ಳಲಾಗಿದೆ. ಇದರಿಂದ ವೈದ್ಯಕೀಯ ಸಿಬ್ಬಂದಿಗಳ ಕೊರತೆಇಲ್ಲದಂತಾಗಿದೆ.

Advertisement

ವೈದ್ಯಕೀಯ ಪರಿಕರಗಳ ಸಂಗ್ರಹ: ಚಿಕಿತ್ಸೆಗೆ ಬೇಕಾದ ಎಲ್ಲ ರೀತಿಯ ವೈದ್ಯಕೀಯಪರಿಕರಗಳನ್ನು ಸಂಗ್ರಹಿಸುವ ಕಾರ್ಯ ನಡೆಯುತ್ತಿದೆ. ಈಗಾಗಲೇ ಸಾಕಷ್ಟು ಮಂದಿದಾನಿಗಳು, ಸಂಘ-ಸಂಸ್ಥೆಗಳು ಕೊರೊನಾ ಸೋಂಕಿನ ಚಿಕಿತ್ಸೆಗೆ ಬೇಕಾದ ಆಕ್ಸಿಜನ್‌ಕಾನ್ಸೆಂಟ್ರೇಟರ್‌, ಆಕ್ಸಿಜನ್‌ ಸಿಲಿಂಡರ್‌ಗಳು, ಮಾಸ್ಕ್ಗಳು, ಸ್ಯಾನಿಟೈಸರ್‌ ಸೇರಿದಂತೆವಿವಿಧ ಚಿಕಿತ್ಸಾ ಪರಿಕರಗಳನ್ನು ನೀಡಿದ್ದಾರೆ.

ಎಚ್‌.ಶಿವರಾಜು

Advertisement

Udayavani is now on Telegram. Click here to join our channel and stay updated with the latest news.

Next