Advertisement

ಸೆ.2ರವರೆಗೆ ಸಿಬಿಐ ಕಸ್ಟಡಿ ವಿಸ್ತರಣೆ; ಈ ಬಾರಿ ಚಿದಂಬರಂಗೆ ಜೈಲಿನಲ್ಲೇ ಗಣೇಶ್ ಹಬ್ಬ

09:26 AM Aug 31, 2019 | Team Udayavani |

ನವದೆಹಲಿ: ಐಎನ್ ಎಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ವಿತ್ತ ಸಚಿವ ಚಿದಂಬರಂ ಅವರ ಸಿಬಿಐ ಕಸ್ಟಡಿಯನ್ನು ಸಿಬಿಐ ವಿಶೇಷ ನ್ಯಾಯಾಲಯ ಶುಕ್ರವಾರ ಸೆಪ್ಟೆಂಬರ್ 2ರವರೆಗೆ ವಿಸ್ತರಿಸಿ ಆದೇಶ ನೀಡಿದೆ.

Advertisement

ಇಂದು ಚಿದಂಬರಂ ಅವರ ಕಸ್ಟಡಿ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ತನಿಖೆಗಾಗಿ ಇನ್ನೂ ಐದು ದಿನಗಳ ಕಾಲ ಕಸ್ಟಡಿಗೆ ಒಪ್ಪಿಸಬೇಕೆಂದು ಸಿಬಿಐ ಪರ ವಕೀಲರು ಮನವಿ ಮಾಡಿಕೊಂಡಿದ್ದರು.

ಸಿಬಿಐ ಬಂಧನಕ್ಕೊಳಗಾಗಿ ಕಳೆದ ಎಂಟು ದಿನಗಳಿಂದ ಚಿದಂಬರಂ ಅವರ ವಿಚಾರಣೆ ನಡೆಯುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಭಾಗಶಃ ವಿಚಾರಣೆ ನಡೆದಿದೆ. ಹೀಗಾಗಿ ದಾಖಲೆಗಳಿಗೆ ಸಂಬಂಧಿಸಿದ ವಿಚಾರಣೆ ಅಗತ್ಯವಿರುವುದರಿಂದ ಐದು ದಿನಗಳ ಕಸ್ಟಡಿಗೆ ಒಪ್ಪಿಸಬೇಕೆಂದು ಸಿಬಿಐ ಪರ ಸಹಾಯಕ ಸಾಲಿಸಿಟರ್ ಜನರಲ್ ಕೆಎಂ ನಟರಾಜ್ ವಾದಿಸಿದ್ದರು. ಬಳಿಕ ವಿಶೇಷ ನ್ಯಾಯಾಧೀಶರಾದ ಅಜಯ್ ಕುಮಾರ್ ಕುಹಾರ್, ನಾಲ್ಕು ದಿನಗಳ ಕಾಲ ಸಿಬಿಐ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದರು.

ಕಳೆದ ಎಂಟು ದಿನಗಳಿಂದ ಸಿಬಿಐ ಕಸ್ಟಡಿಯಲ್ಲಿರುವ ಚಿದಂಬರಂಗೆ ಇನ್ನೂ ನಾಲ್ಕು ದಿನಗಳ ಕಸ್ಟಡಿ ವಿಸ್ತರಣೆಯಾಗುವ ಮೂಲಕ ಈ ಬಾರಿಯ ಗಣೇಶ ಚತುರ್ಥಿ ಜೈಲಿನಲ್ಲಿಯೇ ಆಚರಿಸುವಂತಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next