Advertisement

BJP-JDS ಮೈತ್ರಿ ಬಗ್ಗೆ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಹೇಳಿದ್ದೇನು?

04:20 PM Sep 23, 2023 | Team Udayavani |

ನವದೆಹಲಿ: ಬಿಜೆಪಿ ಮತ್ತು ಜೆಡಿಎಸ್ ತಮ್ಮ ಮೈತ್ರಿಯ ಬಗ್ಗೆ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಶನಿವಾರ ತೀವ್ರ ವಾಗ್ದಾಳಿ ನಡೆಸಿದರು.

Advertisement

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ದೀರ್ಘಕಾಲದ ಶಂಕಿತ ರಹಸ್ಯ ಹೊರಬಿದ್ದಿದೆ. ಬಿಜೆಪಿ ಅಧಿಕೃತವಾಗಿ ಜೆಡಿಎಸ್ ಪಕ್ಷವನ್ನು ಎನ್‌ಡಿಎಗೆ ಸ್ವಾಗತಿಸಿದೆ. ಈ ವರ್ಗಗಳ ಹಿತಾಸಕ್ತಿಗಳಿಗೆ ವಿರುದ್ಧವಾಗಿ ಕೆಲಸ ಮಾಡಲು ಮತ್ತು ಸಾಂಪ್ರದಾಯಿಕ ಮೌಲ್ಯಗಳನ್ನು ಬಲಪಡಿಸಲೆಂದೇ ಮೈತ್ರಿ ಮಾಡಿಕೊಂಡಿರುವ ಈ ನಡೆಯನ್ನು ಕರ್ನಾಟಕದ ಎಸ್‌ಸಿ, ಎಸ್‌ಟಿ, ಒಬಿಸಿ, ಅಲ್ಪಸಂಖ್ಯಾತರು ಮತ್ತು ಮಹಿಳೆಯರು ಈ ಮೈತ್ರಿಯನ್ನು ಗಮನಿಸಬೇಕು’ ಎಂದಿದ್ದಾರೆ.

ಎಚ್‌ಡಿ ಕುಮಾರಸ್ವಾಮಿ ಅವರು ದಿಲ್ಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ನಿವಾಸದಲ್ಲಿ ನಡ್ಡಾ ಅವರನ್ನು ಭೇಟಿ ಮಾಡಿ ಸುದೀರ್ಘ‌ ಮತ್ತು ಸೌಹಾರ್ದ ಮಾತುಕತೆ ನಡೆಸಿದ ನಂತರ ಜೆಡಿಎಸ್ ಪಕ್ಷ ಬಿಜೆಪಿಯೊಂದಿಗೆ (ಎನ್‌ಡಿಎ) ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿತು.


ಜೆಡಿ(ಎಸ್) ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟಕ್ಕೆ (ಎನ್‌ಡಿಎ) ಸೇರ್ಪಡೆಗೊಂಡ ನಂತರ ಕರ್ನಾಟಕದಲ್ಲಿ “ಬಿಜೆಪಿಯ ಬಿ ಟೀಮ್” ಅಧಿಕೃತವಾಗಿ ಒಕ್ಕೂಟದ ಭಾಗವಾಗಿದೆ ಎಂದು ಕಾಂಗ್ರೆಸ್ ಹೇಳಿದೆ.

2024ರ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ರಾಜ್ಯದಲ್ಲಿ ಕಾಂಗ್ರೆಸ್ ಅನ್ನು ಎದುರಿಸಲು ಜೆಡಿಎಸ್ ಬಿಜೆಪಿ ನೇತೃತ್ವದ ಎನ್‌ಡಿಎ ಕೂಟದ ಸಜ್ಜಾಗಿದೆ.

Advertisement

ಈ ಮೈತ್ರಿಯು ಲೋಕಸಭೆ ಚುನಾವಣೆಯಲ್ಲಿ ತನ್ನ ಭವಿಷ್ಯಕ್ಕೆ ಉತ್ತೇಜನ ನೀಡುತ್ತದೆ ಮತ್ತು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವನ್ನು (ಎನ್‌ಡಿಎ) ಬಲಪಡಿಸುತ್ತದೆ ಎಂದು ಬಿಜೆಪಿ ಹೇಳಿದೆ.

 

Advertisement

Udayavani is now on Telegram. Click here to join our channel and stay updated with the latest news.

Next