Advertisement

ಪ.ಬಂಗಾಳದಲ್ಲಿ ಮೇಲ್ವರ್ಗದ ಮೀಸಲು

01:08 AM Jul 04, 2019 | Team Udayavani |

ಕೋಲ್ಕತಾ: ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಕೇಂದ್ರ ಸರ್ಕಾರ ರೂಪಿಸಿದ ಶೇ. 10 ಮೀಸಲು ವ್ಯವಸ್ಥೆಯನ್ನು ವಿರೋಧಿಸಿದ್ದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಈಗ ಅದೇ, ನೀತಿಯನ್ನು ಜಾರಿಗೊಳಿಸಿದ್ದಾರೆ. ಈ ಮೂಲಕ ಈ ನೀತಿಯನ್ನು ಅಳವಡಿಸಿಕೊಂಡ ನಾಲ್ಕನೆಯ ರಾಜ್ಯವಾಗಿದೆ. ಈ ಹಿಂದೆ ತಮಿಳುನಾಡು, ಮಹಾರಾಷ್ಟ್ರ ಮತ್ತು ತೆಲಂಗಾಣ ರಾಜ್ಯಗಳು ಈ ನೀತಿಯನ್ನು ಅಳವಡಿಸಿಕೊಂಡಿವೆ. ನರೇಂದ್ರ ಮೋದಿ ಸರ್ಕಾರ ಚುನಾವಣೆ ಸಮಯದಲ್ಲಿ ಈ ಕಾನೂನು ಜಾರಿಗೊಳಿಸುವ ಮೂಲಕ ಜನರನ್ನು ತಪ್ಪುದಾರಿಗೆ ಎಳೆಯುತ್ತಿದೆ ಎಂದು ಮಮತಾ ಆಕ್ಷೇಪಿಸಿದ್ದರು.

Advertisement

ಪಶ್ಚಿಮ ಬಂಗಾಳದಲ್ಲಿ ಈವರೆಗೆ ಪರಿಶಿಷ್ಟ ಜಾತಿಗೆ ಶೇ. 22, ಪರಿಶಿಷ್ಟ ಪಂಗಡಕ್ಕೆ ಶೇ. 6 ಹಾಗೂ ಇತರ ಹಿಂದುಳಿದ ವರ್ಗಗಳಿಗೆ ಶೇ. 17 ಮೀಸಲಾತಿ ಜಾರಿಯಲ್ಲಿದೆ. ಹೊಸ ವ್ಯವಸ್ಥೆ ಜಾರಿಗೊಳಿಸುವುದರಿಂದಾಗಿ ಒಟ್ಟು ರಾಜ್ಯದ ಮೀಸಲು ಪ್ರಮಾಣ ಶೇ. 50ಕ್ಕಿಂತ ಹೆಚ್ಚಾಗಲಿದೆ. ಸುಪ್ರೀಂ ತೀರ್ಪಿನ ಪ್ರಕಾರ ಮೀಸಲು ಶೇ. 50 ಕ್ಕಿಂತ ಕಡಿಮೆ ಇರಬೇಕು.

Advertisement

Udayavani is now on Telegram. Click here to join our channel and stay updated with the latest news.

Next