Advertisement

ಅತಿಥಿ ಉಪನ್ಯಾಸಕರಿಗೂ ಪ್ಯಾಕೇಜ್‌ ನೀಡಿ

02:11 PM May 10, 2020 | Suhan S |

ಗದಗ: ರೈತರು, ಚಾಲಕರು, ಕ್ಷೌರಿಕರು, ಶ್ರಮಿಕರಿಗೆ, ಕಲಾವಿದರು ಹಾಗೂ ಇನ್ನಿತರೆ ವಲಯಗಳ ಮಾದರಿಯಲ್ಲಿ ರಾಜ್ಯ ಸರಕಾರ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೂ ವಿಶೇಷ ಪ್ಯಾಕೇಜ್‌ ಘೋಷಿಸಬೇಕು ಎಂದು ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅಥಿತಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷ ಹನುಮಂತಗೌಡ ಕಲ್ಮನಿ ಒತ್ತಾಯಿಸಿದ್ದಾರೆ.

Advertisement

ಈ ಕುರಿತು ಮುಖ್ಯಮಂತ್ರಿಗೆ ಪತ್ರ ಬರೆದಿರುವ ಅವರು, ರಾಜ್ಯದಲ್ಲಿ 13 ಸಾವಿರಕ್ಕಿಂತ ಹೆಚ್ಚು ಜನರು ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಲಾಕ್‌ಡೌನ್‌ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮಾರ್ಚ್‌ ತಿಂಗಳಿನಿಂದ ಎಲ್ಲ ಕಾಲೇಜುಗಳನ್ನು ಬಂದ್‌ ಮಾಡಲಾಗಿದೆ. ಸರಕಾರಿ, ಅನುದಾನಿತ ಶಾಲಾ-ಕಾಲೇಜುಗಳ ಸಿಬ್ಬಂದಿಗೆ ವೇತನ ನೀಡಲಾಗಿದೆ. ಆದರೆ ಲಾಕ್‌ಡೌನ್‌ ಆರಂಭವಾದಾಗಿನಿಂದ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರಿಗೆ ವೇತನವಿಲ್ಲದೇ, ಕುಟುಂಬ ನಿರ್ವಹಣೆಯೂ ಕಷ್ಟಕರವಾಗಿದೆ. ಈ ಹಿನ್ನೆಲೆಯಲ್ಲಿ ಶ್ರಮಿಕ ವರ್ಗಕ್ಕೆ ನೀಡಿರುವಂತೆ ವಿಶೇಷ ಪ್ಯಾಕೇಜ್‌ ನೀಡಿ, ಬೆಂಬಲಿಸಬೇಕು ಎಂದು ಮನವಿ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next