Advertisement

ಮೇಕೆದಾಟು ಪಾದಯಾತ್ರೆ; ಡಿಕೆಶಿ ಕನಕಪುರ ನಿವಾಸದಲ್ಲಿ ತಂತ್ರಗಾರಿಕೆ ಸಭೆ

12:40 PM Jan 08, 2022 | Team Udayavani |

ಬೆಂಗಳೂರು: ಮೇಕೆದಾಟು ಪಾದಯಾತ್ರೆಗೆ ಸಂಬಂಧಪಟ್ಟಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಮಧ್ಯಾಹ್ನ ೩ ಗಂಟೆಗೆ ಮಹತ್ವದ ತಂತ್ರಗಾರಿಕೆ ಸಭೆ ನಡೆಯಲಿದೆ.

Advertisement

ಕನಕಪುರದಲ್ಲಿರುವ ಶಿವಕುಮಾರ್ ನಿವಾಸದಲ್ಲಿ ನಡೆಯುವ ಈ ಸಭೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಸಂಸದ ಡಿ.ಕೆ.ಸುರೇಶ್, ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ, ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ ಸೇರಿದಂತೆ ಕಾಂಗ್ರೆಸ್‌ನ ಹಿರಿಯ ನಾಯಕರು ಭಾಗವಹಿಸಲಿದ್ದಾರೆ.

ಪಾದಯಾತ್ರೆ ಕೈ ಬಿಡಿ ಎಂದು ಸರಕಾರ ಪದೇ ಪದೇ ಆಗ್ರಹಿಸುತ್ತಿದೆ. ಜತೆಗೆ ವಾರಾಂತ್ಯದ ಲಾಕ್‌ಡೌನ್ ಜಾರಿಗೆ ತಂದಿದೆ. ಪಾದಯಾತ್ರೆ ಸಾಗುವ ಕನಕಪುರ-ಸಂಗಮ ಮಾರ್ಗದಲ್ಲಿ ಭಾರಿ ಬಂದೋಬಸ್ತ್ ಜಾರಿಯ ಜತೆಗೆ ಕಟ್ಟುನಿಟ್ಟಿನ ನಿಯಮಗಳನ್ನು ಅನುಷ್ಠಾನ ಮಾಡುವಂತೆ ಸೂಚಿಸಿದೆ. ಕಾಂಗ್ರೆಸ್‌ನ ಒಂದು ಮೂಲಗಳ ಪ್ರಕಾರ ಪಾದಯಾತ್ರೆ ಆರಂಭಕ್ಕೆ ಮುನ್ನವೇ ಕಾಂಗ್ರೆಸ್ ನಾಯಕರ ಬಂಧನ ಸಾಧ್ಯತೆಯೂ ಇದೆ. ಇದೆಲ್ಲದರ ಹಿನ್ನೆಲೆಯಲ್ಲಿ ಮುಂದಿನ ನಡೆ ನಿರ್ಧರಿಸುವ ಬಗ್ಗೆ ಸಭೆ ನಡೆಸಲಾಗುತ್ತಿದೆ.

ಕೆಪಿಸಿಸಿ ಮೂಲಗಳ ಪ್ರಕಾರ ಯಾವುದೇ ಸಂದರ್ಭ ಎದುರಾದರೂ ಪಾದಯಾತ್ರೆ ನಿಲ್ಲಿಸದೇ ಇರಲು ಡಿ.ಕೆ.ಶಿವಕುಮಾರ್ ನಿರ್ಧರಿಸಿದ್ದಾರೆ. ಒಂದೊಮ್ಮೆ ಬಂಧನವಾದರೆ ಎಲ್ಲಿ ಬಂಧಿಸಿದ್ದಾರೋ ಅಲ್ಲಿಂದಲೇ ಮರುದಿನ ಪಾದಯಾತ್ರೆ ಆರಂಭಿಸುವುದಕ್ಕೆ ಪ್ರತ್ಯೇಕ ತಂಡ ರಚನೆ ಮಾಡಲಾಗುತ್ತಿದೆ. ಹೀಗಾಗಿ ಮಧ್ಯಾಹ್ನ 3 ಗಂಟೆಯಿಂದ ಆರಂಭವಾಗುವ ಸಭೆ ಭಾರಿ ಮಹತ್ವ ಪಡೆದುಕೊಂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next