Advertisement

ಪಡೀಲ್ ದುರ್ಘಟನೆ: ಸರಕಾರದ ಹತ್ತು ಲಕ್ಷ ರೂಪಾಯಿ ಪರಿಹಾರ ಚೆಕ್ ವಿತರಣೆ

06:27 PM Sep 09, 2019 | Naveen |

ಮಂಗಳೂರು: ಪಡೀಲ್ ಬಳಿಯ ಕೊಡಕ್ಕಲ್ ಶಿವನಗರದಲ್ಲಿ ಭಾನುವಾರದಂದು ಮನೆಮೇಲೆ ತಡೆಗೋಡೆ ಕುಸಿದು ಮೃತಪಟ್ಟ ಮಕ್ಕಳಿಬ್ಬರ ಹೆತ್ತವರಿಗೆ ಶಾಸಕ ಡಿ ವೇದವ್ಯಾಸ ಕಾಮತ್ ಅವರು ರಾಜ್ಯ ಸರಕಾರದ ವತಿಯಿಂದ ಹತ್ತು ಲಕ್ಷ ರೂಪಾಯಿ ಪರಿಹಾರದ ಚೆಕ್ ಹಾಗೂ ತಮ್ಮ ವೈಯಕ್ತಿಕ ನೆಲೆಯಿಂದ ತಮ್ಮದೇ ಸೇವಾ ಸಂಸ್ಥೆಯಾದ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಮೂಲಕ ಒಂದು ಲಕ್ಷ ರೂಪಾಯಿ ಚೆಕ್ ಅನ್ನು ಸೋಮವಾರದಂದು ವಿತರಿಸಿದರು.

Advertisement

ಇನ್ನು ಮೃತಪಟ್ಟ ಮಕ್ಕಳ ಹೆತ್ತವರಾದ ರಾಮಣ್ಣ ಗೌಡ-ರಜನಿ ದಂಪತಿಗೆ ಮನೆ ಕಟ್ಟಲು ಸರಕಾರದ ವತಿಯಿಂದ ಜಾಗ ಹಾಗೂ ಮನೆ ಕಟ್ಟಲು ಸಹಾಯ ಧನ ಕೂಡ ಸರಕಾರದ ವತಿಯಿಂದ ನೀಡುವುದಾಗಿ ಶಾಸಕ ಕಾಮತ್ ತಿಳಿಸಿದ್ದಾರೆ. ಶಾಸಕರೊಂದಿಗೆ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಬಿಜೆಪಿ ಮುಖಂಡರಾದ ಸುಧೀರ್ ಶೆಟ್ಟಿ ಕಣ್ಣೂರು, ವಸಂತ ಜೆ ಪೂಜಾರಿ, ಕಂದಾಯ ಅಧಿಕಾರಿಗಳು, ಸ್ಥಳೀಯರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next