Advertisement

ಪದ್ಮ ಪ್ರಶಸ್ತಿ ಪುರಸ್ಕಾರ: ಅಭಿನಂದನೆ

11:16 AM Jan 27, 2021 | Team Udayavani |

ಬೆಂಗಳೂರು: ರಾಜ್ಯದ ಪದ್ಮವಿಭೂಷಣ ಪ್ರಶಸ್ತಿ ವಿಜೇತರಾದ ವೈದ್ಯಕೀಯ ಕ್ಷೇತ್ರದ ಸಾಧಕ ಡಾ. ಬಿ.ಎಂ. ಹೆಗ್ಡೆ, ಪದ್ಮಭೂಷಣ ಪ್ರಶಸ್ತಿ ವಿಜೇತ ಸಾಹಿತಿ ಚಂದ್ರಶೇಖರ ಕಂಬಾರ ಮತ್ತು ಪದ್ಮಶ್ರೀ ಪ್ರಶಸ್ತಿ ವಿಜೇತರಾದ ಜಾನಪದ ಕಲಾವಿದೆ ಮಂಜಮ್ಮ ಜೋಗತಿ, ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದ ಸಾಧಕ ಆರ್‌.ಎಲ್ ಕಶ್ಯಪ್‌ ಹಾಗೂ ಕ್ರೀಡಾ ಸಾಧಕ ಕೆ.ವೈ. ವೆಂಕಟೇಶ್‌ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌  ಕಟೀಲ್‌ ಅಭಿನಂದಿಸಿದ್ದಾರೆ.

Advertisement

ಇದನ್ನೂ ಓದಿ:ಸಿಎಂ ನಿವಾಸಕ್ಕೆ ದೌಡಾಯಿಸಿದ ಹೊರಟ್ಟಿ; ಸಭಾಪತಿ ಸ್ಥಾನ ಜೆಡಿಎಸ್ ಗೆ ಬಿಟ್ಟುಕೊಡುವಂತೆ ಮನವಿ

ಜನಪ್ರಿಯ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಕೇಂದ್ರ ಸರಕಾರ ನಿರಂತರವಾಗಿ ಸಮಾಜದ ಎಲೆಮರೆಯ ಕಾಯಿಗಳಂತಿರುವ ಹಾಗೂ ಅತ್ಯುತ್ತಮ ಸಾಧಕರಾಗಿರುವ ವ್ಯಕ್ತಿಗಳನ್ನು ವಿವಿಧ ಪ್ರಶಸ್ತಿ ಮತ್ತು ಪುರಸ್ಕಾರಗಳಿಗೆ ಆಯ್ಕೆ ಮಾಡುತ್ತಿದೆ. ಅರ್ಹತೆಯನ್ನೇ ಮಾನದಂಡವಾಗಿ ಬಳಸಿಕೊಳ್ಳುತ್ತಿರುವುದು ನಿಜಕ್ಕೂ ಶ್ಲಾಘನಾರ್ಹ. ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸುವುದಾಗಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next