Advertisement

ಪದ್ಮಾವತಿ ಚಿತ್ರ ನಿಷೇಧಕ್ಕೆ ಆಗ್ರಹ

10:51 AM Nov 24, 2017 | Team Udayavani |

ಕಲಬುರಗಿ: ವಿವಾದಿತ ಪದ್ಮಾವತಿ ಹಿಂದಿ ಚಲನಚಿತ್ರವನ್ನು ನಿಷೇಧಿಸಬೇಕೆಂದು ಆಗ್ರಹಿಸಿ ಜಿಲ್ಲಾ ರಜಪೂತ ಸಮಾಜ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಖಡ್ಗಗಳನ್ನು ಹಿಡಿದುಕೊಂಡು ಭಾಗವಹಿಸಿದ್ದ ಎಂಟು ಜನರನ್ನು ಪೊಲೀಸರು ಬಂಧಿಸಿದ್ದಾರೆ. ನಂದಕಿಶೋರ ಚೌಹಾಣ, ಕಿರಣಸಿಂಗ್‌ ಗೆಹರವಾರ, ಕಾರ್ತಿಕಸಿಂಗ್‌ ಬಯಾಸ್‌, ನರೇಶ ದುಬೈ, ಆಕಾಶಸಿಂಗ್‌ ಗೆಹರವಾರ, ಕಿರಣಸಿಂಗ ಹಜಾರೆ, ಗೌರವ ಠಾಕೂರ, ಆಕಾಶ ಠಾಕೂರ ಎಂಬುವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ ಎಂದು ಐಜಿಪಿ ಅಲೋಕಕುಮಾರ ತಿಳಿಸಿದ್ದಾರೆ.

Advertisement

ಘಟನೆಗೆ ಸಂಬಂಧಿಸಿದಂತೆ ಬೇಜವಾಬ್ದಾರಿ ಪ್ರದರ್ಶಿಸಿದ ಚೌಕ ಠಾಣೆಯ ಎಎಸ್‌ಐ ಹಾಗೂ ಸ್ಟೇಷನ್‌ ಬಜಾರ ಎಎಸ್‌ಐ ಅವರನ್ನು ಅಮಾನತುಗೊಳಿಸಲಾಗಿದೆ ಹಾಗೂ ಚೌಕ್‌, ಬ್ರಹ್ಮಪೂರ ಹಾಗೂ ಸ್ಟೇಷನ್‌ ಬಜಾರ ಪಿಐಗಳ ವಿರುದ್ಧ ಭವಿಷ್ಯದಲ್ಲಿ ಇಂತಹ ಘಟನೆ ಮರುಕಳಿಸದಂತೆ ಎಚ್ಚರವಾಗಿ ಕರ್ತವ್ಯ ನಿರ್ವಹಿಸುವಂತೆ ಎಚ್ಚರಿಕೆ ನೀಡಲಾಗಿದೆ ಎಂದು ಐಜಿಪಿ ತಿಳಿಸಿದ್ದಾರೆ.

ಪದ್ಮಾವತಿ ಚಲನಚಿತ್ರವನ್ನು ವಿರೋಧಿಸಿ ರವಾನಗಿಯಿಲ್ಲದೇ ಶಹಾಬಜಾರ ಕಟಗರಪೂರದ ಬಾಲಾಜಿ ಮಂದಿರದಿಂದ ಶಹಾಬಜಾರ ನಾಕಾ, ಪ್ರಕಾಶ ಟಾಕೀಸ್‌, ಚೌಕ್‌ ಸರ್ಕಲ್‌, ಸೂಪರ್‌ ಮಾರ್ಕೆಟ್‌, ಜಗತ್‌ ವೃತ್ತದ ಮೂಲಕ ಸರ್ದಾರ
ವಲ್ಲಭಭಾಯಿ ಪಟೇಲ್‌ ವೃತ್ತದವರೆಗೆ ಕಾನೂನುಬಾಹಿರವಾಗಿ ಪ್ರತಿಭಟನೆ ನಡೆಸಿದ್ದಲ್ಲದೇ, ಖಡ್ಗ ಪ್ರದರ್ಶಿಸುತ್ತ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದರು. ಈ ಬಗ್ಗೆ ಚೌಕ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದರ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next