Advertisement

ಪಡುಬಿದ್ರಿ: ಪತ್ನಿಯಿಂದ ಸಾಲ ಮಾಡಿಸಿ ವಿಷವುಣಿಸಿದ ಪತಿ

08:42 PM Sep 07, 2022 | Team Udayavani |

ಪಡುಬಿದ್ರಿ: ಹೆಂಡತಿ ಹೆಸರಲ್ಲಿ ಮಾಡಿದ ಸಾಲವನ್ನು ತೀರಿಸದೆ ಅದರಿಂದ ಪಾರಾಗಲು ಹೆಂಡತಿಯೊಂದಿಗೆ ಆತ್ಮಹತ್ಯೆ ನಾಟಕ ವಾಡಿ ಕೊಲೆ ಮಾಡಿರುವುದಾಗಿ ಪತಿ ಹಾಗೂ ಆತನ ಮನೆಯವರ ವಿರುದ್ಧ ಮೃತ ಮಹಿಳೆಯ ಅಕ್ಕ ಪಡುಬಿದ್ರೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Advertisement

ವಿದ್ಯಾ ( 29 ) ಮೃತಪಟ್ಟ ಮಹಿಳೆ. ವಿದ್ಯಾ ಅವರು ಬಡಾ ಗ್ರಾಮದ ಮುಳ್ಳುಗುಡ್ಡೆ ನಿವಾಸಿ ಯತಿನ್ ರಾಜ್ ಎಂಬಾತನನ್ನು ಪ್ರೀತಿಸಿ 2017 ರ ಫೆ .28 ರಂದು ವಿವಾಹವಾಗಿದ್ದರು. ಗಂಡನ ಮನೆಯಲ್ಲಿ ಯತಿನ್ ರಾಜ್, ಮಾವ ರಾಘು, ಅತ್ತೆ ಗೀತಾ ಮತ್ತು ಮೈದುನ ಯಕ್ಷಿತ್ ಎಂಬವರು ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದರು ಹಾಗೂ ಯತಿನ್ ರಾಜ್ ನು ಸರಿಯಾಗಿ ಕೆಲಸ ಮಾಡದೇ ವಿದ್ಯಾಳಿಂದ ಹಲವು ಬ್ಯಾಂಕ್, ಸೊಸೈಟಿ ಸಂಘ, ಸಂಸ್ಥೆಗಳಿಂದ ಸಾಲ ತೆಗೆಸಿ ಅದನ್ನು ಖರ್ಚು ಮಾಡುತ್ತಿದ್ದನು. ಮಾತ್ರವಲ್ಲದೆ ವಿದ್ಯಾ ಅವರ ತಂದೆ ಕೊಟ್ಟ ಹಣವನ್ನೂ ಖರ್ಚು ಮಾಡಿ, ಚಿನ್ನವನ್ನು ಮಾರಾಟ ಮಾಡಿ ಖರ್ಚು ಮಾಡಿದ್ದಾನೆ. ಇದರ ಜೊತೆಗೆ ಇನ್ನೂ ಹೆಚ್ಚಿನ ಸಾಲ ತೆಗೆದುಕೊಡುವಂತೆ ಒತ್ತಾಯಿಸಿ ಕಿರುಕುಳ ನೀಡುತ್ತಾ ದೈಹಿಕ ಹಿಂಸೆ ನೀಡುತ್ತಿದ್ದನು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಇದನ್ನೂ ಓದಿ:ಶರದ್ ಪವಾರ್ ಭೇಟಿ ಮಾಡಿದ ನಿತೀಶ್: ಪ್ರಧಾನಿ ಅಭ್ಯರ್ಥಿ ಕುರಿತು ಹೇಳಿದ್ದೇನು?

ಪತಿಯ ನಾಟಕ

ಗಂಡನ ಮನೆಯವರ ಕಿರುಕುಳವು ಹೆಚ್ಚಾಗಿ ಅದನ್ನು ತಡೆಯಲಾರದೆ ಯತಿನ್‌ರಾಜ್‌ ಜತೆ ಮನೆಯಿಂದ ಹೊರಬಂದು ಕಳೆದೆರಡು ತಿಂಗಳ ಹಿಂದೆ ಉಚ್ಚಿಲದಲ್ಲಿ ಹಾಗೂ ಕಳೆದೊಂದು ತಿಂಗಳುಗಳಿಂದ ಕಾಪು ಲೈಟ್‌ಹೌಸ್‌ ಬಳಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಅಲ್ಲೂ ಆರೋಪಿ ಗಂಡನ ಕಿರುಕುಳ ತಪ್ಪಿರಲಿಲ್ಲ. ಇನ್ನು ಮುಂದಕ್ಕೆ ಸಾಲ ಮಾಡಿಕೊಡುವುದಿಲ್ಲ ಎಂದು ವಿದ್ಯಾ ಹೇಳಿದ್ದರಿಂದ ವಿದ್ಯಾರನ್ನು ಕೊಂದರೆ ಅವರಿಂದ ಮಾಡಿಸಿದ ಸಾಲ ತೀರುತ್ತದೆ ಎಂಬ ಕಾರಣಕ್ಕೆ ಯತಿನನು ಯೋಜನೆ ರೂಪಿಸಿ ಇಬ್ಬರೂ ವಿಷ ಸೇವಿಸಿ ಸಾಯೋಣವೆಂದು ಪತ್ನಿಯನ್ನು ನಂಬಿಸಿ, ಅವಳಿಗೆ ಹೆಚ್ಚಿನ ಪ್ರಮಾಣದಲ್ಲಿ ವಿಷ ಕುಡಿಸಿ, ಬಳಿಕ ತನ್ನ ಮೇಲೆ ಅನುಮಾನ ಬರಬಾರದೆಂದು ತಾನೂ ಸ್ವಲ್ಪ ಪ್ರಮಾಣದಲ್ಲಿ ವಿಷ ಸೇವಿಸಿ ನಾಟಕ ಮಾಡುತ್ತಿರುವುದಾಗಿ ಪಡುಬಿದ್ರಿ ಪೊಲೀಸರಿಗೆ ಈ ಕುರಿತಾಗಿ ದೂರನ್ನಿತ್ತಿರುವ ವಿದ್ಯಾಳ ಅಕ್ಕ ಲೀಲಾವತಿ ತಿಳಿಸಿದ್ದಾರೆ.

Advertisement

ಆರೋಪಿ ಯತಿನ್‌ರಾಜ್‌ ಉಡುಪಿಯ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next