Advertisement

ಪಡುಬಿದ್ರಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ…ಆರೋಪಿಗೆ 10 ವರ್ಷ ಜೈಲು ಶಿಕ್ಷೆ

09:56 PM Feb 04, 2023 | Team Udayavani |

ಉಡುಪಿ/ಪಡುಬಿದ್ರಿ: ನಾಲ್ಕು ವರ್ಷಗಳ ಹಿಂದೆ ಕರಾಟೆ ತರಗತಿಯಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪೋಕ್ಸೋ ಪ್ರಕರಣದ ಆರೋಪಿಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿನ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯವು 10 ವರ್ಷ ಜೈಲು ಶಿಕ್ಷೆ ವಿಧಿಸಿ ಶನಿವಾರ ಆದೇಶಿಸಿದೆ.

Advertisement

ಪಡುಬಿದ್ರಿ ಸಮೀಪದ ಹೆಜಮಾಡಿ ನಿವಾಸಿ ಉಮೇಶ್‌ ಬಂಗೇರ (48) ಶಿಕ್ಷೆಗೆ ಗುರಿಯಾಗಿರುವ ಆರೋಪಿ. ಈತ ಪಡುಬಿದ್ರಿಯಲ್ಲಿ ಕರಾಟೆ ತರಗತಿ ನಡೆಸುತ್ತಿದ್ದು, 2020ರ ಫೆ. 12ರಂದು ಕರಾಟೆ ತರಗತಿಗೆ ಬಂದಿದ್ದ 12 ವರ್ಷ ವಯಸ್ಸಿನ ಬಾಲಕಿ ಮೇಲೆ ತರಗತಿ ಮುಗಿದ ಬಳಿಕ ದೈಹಿಕ ದೌರ್ಜನ್ಯ ಎಸಗಿದ್ದ. ಅಲ್ಲದೆ ಈ ವಿಚಾರ ಯಾರಲ್ಲೂ ಹೇಳಬಾರದೆಂದು ಆತ ಬಾಲಕಿಗೆ ಬೆದರಿಕೆ ಹಾಕಿದ್ದ.

2020ರ ಸೆ. 27ರಂದು ಬಾಲಕಿಯ ತಾಯಿಗೆ ಕರೆ ಮಾಡಿದ ಆರೋಪಿ, ಈ ದಿನ ತರಗತಿ ಇದ್ದು, ಬಾಲಕಿಯನ್ನು ಕಳುಹಿಸಿಕೊಂಡುವಂತೆ ಕೋರಿಕೊಂಡಿದ್ದ. ಅದರಂತೆ ಬಾಲಕಿಯ ತಾಯಿ ತರಗತಿಗೆ ಹೋಗುವಂತೆ ಬಾಲಕಿಗೆ ತಿಳಿಸಿದ್ದರು. ಆದರೆ ಬಾಲಕಿ ತರಗತಿಗೆ ಹೋಗಲು ಒಪ್ಪದೆ ಅಳುತ್ತಿದ್ದಳು. ಆಗ ತಾಯಿ ವಿಚಾರಿಸಿದಾಗ ವಿಚಯ ಬೆಳಕಿಗೆ ಬಂದಿತ್ತು. ಅದರಂತೆ ತಾಯಿ ಆರೋಪಿ ವಿರುದ್ಧ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಆಗಿನ ಕಾಪು ವೃತ್ತ ನಿರೀಕ್ಷಕ ಮಹೇಶ್‌ ಪ್ರಸಾದ್‌ ತನಿಖೆ ನಡೆಸಿ ಆರೋಪಿ ವಿರುದ್ಧ ದೋಷರೋಪಣ ಪಟ್ಟಿ ಸಲ್ಲಿಸಿದ್ದರು. ಒಟ್ಟು 26 ಸಾಕ್ಷಿಗಳ ಪೈಕಿ 13 ಸಾಕ್ಷಿಗಳ ವಿಚಾರಣೆಯನ್ನು ಅಭಿಯೋಜನೆ ಮಾಡಿದ್ದರು. ಆರೋಪಿ ಮೇಲಿನ ಆರೋಪ ಸಾಬೀತಾಗಿದೆ ಎಂದು ಅಭಿಪ್ರಾಯಪಟ್ಟ ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಅವರು ಆರೋಪಿಗೆ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಆರೋಪಿಗೆ ಪೋಕ್ಸೋ ಕಾಯ್ದೆಯಡಿ 10 ವರ್ಷ ಜೈಲು ಶಿಕ್ಷೆ ಮತ್ತು 10 ಸಾವಿರ ರೂ. ದಂಡ, ದಂಡ ಪಾವತಿಸಲು ತಪ್ಪಿದಲ್ಲಿ ಒಂದು ವರ್ಷ ಹೆಚ್ಚುವರಿ ಜೈಲು, ಲೈಂಗಿಕ ದೌರ್ಜನ್ಯ ಪ್ರಕರಣದಡಿ 10 ವರ್ಷ ಜೈಲು ಶಿಕ್ಷೆ ಮತ್ತು 10 ಸಾವಿರ ರೂ. ದಂಡ, ದಂಡ ಪಾವತಿಸಲು ತಪ್ಪಿದಲ್ಲಿ ಒಂದು ವರ್ಷ ಹೆಚ್ಚುವರಿ ಸಜೆ, ಕೊಲೆ ಬೆದರಿಕೆ ಪ್ರಕರಣದಡಿ ಒಂದು ವರ್ಷ ಸಜೆ ಮತ್ತು ಒಂದು ಸಾವಿರ ರೂ. ದಂಡ ಮತ್ತು ತಪ್ಪಿದಲ್ಲಿ ಒಂದು ತಿಂಗಳ ಸಾದಾ ಸಜೆ, ದೈಹಿಕ ಲೈಂಗಿಕ ಕಿರುಕುಳ ಪ್ರಕರಣದಡಿ ಒಂದು ವರ್ಷ ಜೈಲು ಶಿಕ್ಷೆ ಮತ್ತು ಒಂದು ಸಾವಿರ ರೂ. ದಂಡ ವಿಧಿಸಿ, ತಪ್ಪಿದಲ್ಲಿ ಒಂದು ತಿಂಗಳ ಹೆಚ್ಚುವರಿ ಸಾದಾ ಸಜೆ ನೀಡಿ ಆದೇಶ ಹೊರಡಿಸಿದೆ.

Advertisement

ದಂಡದ ಒಟ್ಟು 22 ಸಾವಿರ ರೂ. ಮೊತ್ತದಲ್ಲಿ 17,000 ರೂ. ನೊಂದ ಬಾಲಕಿಗೆ ಪರಿಹಾರವಾಗಿ ಮತ್ತು 5 ಸಾವಿರ ರೂ. ಸರಕಾರಕ್ಕೆ ಪಾವತಿಸಬೇಕು. ಅಲ್ಲದೆ ಸರಕಾರ ನೊಂದ ಬಾಲಕಿಗೆ ಒಂದು ಲ.ರೂ. ಪರಿಹಾರ ನೀಡಬೇಕು ಎಂದು ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ. ಪ್ರಾಸಿಕ್ಯೂಶನ್‌ ಪರ ಉಡುಪಿ ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ. ರಾಘವೇಂದ್ರ ವಾದಿಸಿದ್ದರು.

ಇದನ್ನೂ ಓದಿ: ಮಾನನಷ್ಟ ಮೊಕದ್ದಮೆ: ಲ.ರೂ. ಪರಿಹಾರಕ್ಕೆ ಆದೇಶ

Advertisement

Udayavani is now on Telegram. Click here to join our channel and stay updated with the latest news.

Next