Advertisement

ಪಡುಬಿದ್ರಿ : ಮನೆ ಸಾಲ ಕಟ್ಟದ ಆತಂಕ : ವಿಷ ಬೆರೆಸಿದ ಮದ್ಯ ಕುಡಿದು ಸಾವು

08:46 PM Jun 08, 2022 | Team Udayavani |

ಪಡುಬಿದ್ರಿ : ಸಾಲ ಪಡೆದು ಮನೆ ಕಟ್ಟಲು ಮುಂದಾಗಿದ್ದ ಪೂಂದಾಡು ದರ್ಕಾಸ್ತು ನಿವಾಸಿ ಅಶೋಕ ವಿ. ಮೂಲ್ಯ (39) ಅವರು, ಬ್ಯಾಂಕಿನವರು ಜಾಗ ಹಾಗೂ ಅರ್ಧ ಕಟ್ಟಿದ ಮನೆಯನ್ನು ಸ್ವಾಧೀನಪಡಿಸಿಕೊಂಡ ಹಿನ್ನೆಲೆಯಲ್ಲಿ ಮತ್ತು ಮನೆ ಸಾಲ ಕಟ್ಟದ ಆತಂಕದಲ್ಲಿ ಮದ್ಯದೊಂದಿಗೆ ವಿಷ ಬೆರೆಸಿ ಕುಡಿದು ಜೂ. 7ರ ರಾತ್ರಿ ಸಾವನ್ನಪ್ಪಿದ್ದಾರೆ.

Advertisement

ಅಶೋಕ್‌ ಮೂಲ್ಯ ಕೂಲಿ ಕೆಲಸ ಮಾಡಿಕೊಂಡಿದ್ದು, ಅವರು ಪೆರ್ಡೂರು ಗ್ರಾಮದ ಜೋಗಿಬೆಟ್ಟುವಿನಲ್ಲಿ ಜಾಗ ಖರೀದಿ ಮಾಡಿ ಮನೆ ಕಟ್ಟುವ ಸಲುವಾಗಿ ಬ್ಯಾಂಕಿನಿಂದ ಸುಮಾರು 6 ಲಕ್ಷ ರೂ. ಸಾಲ ಪಡೆದಿದ್ದರು. ಅರ್ಧದಷ್ಟು ಮನೆಯ ಕಾಮಗಾರಿ ಮುಗಿಸಿದ್ದು, ಕೊರೊನಾ ಕಾರಣದಿಂದ ಬ್ಯಾಂಕಿನ ಸಾಲ ಮರುಪಾವತಿ ಮಾಡಲು ಸಾಧ್ಯವಾಗಿರಲಿಲ್ಲ. ಇದರಿಂದ ಬ್ಯಾಂಕಿನವರು ಮನೆ ಮತ್ತು ಜಾಗವನ್ನು ಸ್ವಾಧೀನಪಡಿಸಿಕೊಂಡಿದ್ದರು.

ಅದೇ ಚಿಂತೆಯಲ್ಲಿ ಅಶೋಕ್‌ ಮದ್ಯಪಾನ ಮಾಡುತ್ತಿದ್ದರು. ಜೂ. 7ರಂದು ಎಂದಿನಂತೆ ಕೂಲಿ ಕೆಲಸಕ್ಕೆ ಹೋಗಿ ರಾತ್ರಿ ಬಂದು ತೆಂಕ ಎರ್ಮಾಳು ಗ್ರಾಮದ ಪೂಂದಾಡು ದರ್ಖಾಸ್ತುವಿನಲ್ಲಿರುವ ಮನೆಯಲ್ಲಿ ರಾತ್ರಿ ಮಲಗಿದ್ದವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next