Advertisement

Padubidri: ಅಪಘಾತದ ಗಾಯಾಳು ಸಾವು

12:03 AM Apr 29, 2024 | Team Udayavani |

ಪಡುಬಿದ್ರಿ: ತೆಂಕ ಎರ್ಮಾಳು ರಾಷ್ಟ್ರೀಯ ಹೆದ್ದಾರಿಯ ಉಡುಪಿ – ಮಂಗಳೂರು ಏಕಮುಖ ರಸ್ತೆಯಲ್ಲಿ ಶನಿವಾರ ರಾತ್ರಿ ಬೈಕ್‌ ಢಿಕ್ಕಿಯಾಗಿ ತಲೆಗೆ ತೀವ್ರ ಗಾಯಗೊಂಡು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳ ತಾ| ಬರಿಮಾರು ಗ್ರಾಮದ ಬಿ. ಸಂಜೀವ ಪೂಜಾರಿ (58)ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

Advertisement

ಟ್ಯಾಂಕರ್‌ ಚಾಲಕರಾಗಿದ್ದ ಅವರು ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದರು. ರಾತ್ರಿ ಊಟ ಮಾಡಲು ತಮ್ಮ ಟ್ಯಾಂಕರನ್ನು ರಸ್ತೆ ಬದಿ ನಿಲ್ಲಿಸಿ ರಸ್ತೆ ವಿಭಾಜಕ ದಾಟಿ ರಸ್ತೆ ಬದಿ ನಿಂತಿದ್ದ ವೇಳೆ ಈ ಘಟನೆ ಸಂಭವಿಸಿತ್ತು.

ಪಡುಬಿದ್ರಿ ಕಡೆಗೆ ಹೋಗುತ್ತಿದ್ದ ಬೈಕ್‌ ಸವಾರ ಅತೀ ವೇಗ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಿ ಪಾದಚಾರಿಗೆ ಢಿಕ್ಕಿ ಹೊಡೆದಿದ್ದ. ಬೈಕ್‌ ಸವಾರನಿಗೂ ಗಾಯ ಗಳಾಗಿದ್ದು ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next