Advertisement

Padubidri: ಪಾದಯಾತ್ರಿಗಳಿಗೆ ಮೋಟಾರು ಬೈಕ್‌ ಢಿಕ್ಕಿ; ಇಬ್ಬರಿಗೆ ಗಾಯ

08:47 PM Oct 28, 2024 | Team Udayavani |

ಪಡುಬಿದ್ರಿ: ಕಂಚಿನಡ್ಕದಿಂದ ಕಟೀಲಿಗೆ ಮುಂಜಾವದ ವೇಳೆ ಪಾದಯಾತ್ರೆಯಲ್ಲಿ ಹೊರಟಿದ್ದ ರಮೇಶ್‌(48) ಹಿಗೂ ವಾಣಿ(46) ಎಂಬವರಿಗೆ ಹೆಜಮಾಡಿ ಪೆಟ್ರೋಲ್‌ ಬಂಕ್‌ ಬಳಿ ರಾಷ್ಟ್ರೀಯ ಹೆದ್ದಾರಿಯ ಪೂರ್ವಬದಿಯಲ್ಲಿ ರಸ್ತೆಯಂಚಿನಲ್ಲಿ ನಡೆದು ಹೋಗುತ್ತಿದ್ದಾಗ ಹಿಂದಿನಿಂದ ಧಾವಿಸಿ ಬಂದ ಮೋಟಾರು ಬೈಕು ಢಿಕ್ಕಿಯಾಗಿ ರಸ್ತೆಗೆ ಬಿದ್ದು ತೀವ್ರ ಗಾಯಗೊಂಡಿದ್ದಾರೆ.

Advertisement

ಗಾಯಾಳುಗಳು ತಮ್ಮ ಮಗ ಅನೀಷ್‌ನೊಂದಿಗೆ ಹೋಗುತ್ತಿದ್ದಾಗ ಈ ಘಟನೆಯು ಸಂಭವಿಸಿದೆ. ಮೋಟಾರು ಬೈಕ್‌ ಸವಾರ ಆರೋಪಿ ವಿಕ್ರಮ್‌ ಎಂಬವರಿಗೂ ಗಾಯಗಳಾಗಿದ್ದು ಮೂವರು ಗಾಯಾಳುಗಳೂ ಸುರತ್ಕಲ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣವು ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next