Advertisement

ಪಡುಕರೆ ಕಾಲೇಜ್‌: ಹಳೆ ವಿದ್ಯಾರ್ಥಿ ಸಂಘದಿಂದ ಬೀಳ್ಕೊಡುಗೆ

03:45 AM Jul 06, 2017 | Harsha Rao |

ಕೋಟ: ಲಕ್ಷ್ಮೀ ಸೋಮ ಬಂಗೇರ ಪ್ರಥಮ ದರ್ಜೆ ಕಾಲೇಜು ಮಣೂರು ಪಡುಕರೆ ಇಲ್ಲಿನ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ಪ್ರಸ್ತುತ  ಕಾಳಾವರ ವರದರಾಜ ಶೆಟ್ಟಿ  ಪ್ರಥಮ ದರ್ಜೆ ಕಾಲೇಜಿಗೆ ವರ್ಗಾವಣೆಗೊಂಡ  ಡಾ|ಎಸ್‌. ರಾಜೇಂದ್ರ ನಾಯಕ್‌ ಅವರಿಗೆ ಹಾಗೂ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಶಿವಕುಮಾರ್‌ ಅವರಿಗೆ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ  ಸಮ್ಮಾನ ಹಾಗೂ ಬೀಳ್ಕೊಡುಗೆ ಕಾರ್ಯಕ್ರಮ ಜೂ.30ರಂದು ಕಾಲೇಜಿನ ವಠಾರದಲ್ಲಿ ಜರಗಿತು.

Advertisement

ರಾಜೇಂದ್ರ ನಾಯಕ್‌ ಅವರು ಸಮ್ಮಾನ ಸ್ವೀಕರಿಸಿ ಮಾತನಾಡಿ,  ನಿರಂತರ ಒಂಬತ್ತು ವರ್ಷಗಳ ಕಾಲ ಗ್ರಾಮೀಣ ಭಾಗವಾದ ಕೋಟ ಪರಿಸರದಲ್ಲಿ ಉಪನ್ಯಾಸಕನಾಗಿ, ಪ್ರಾಂಶುಪಾಲನಾಗಿ ಸೇವೆ ಸಲ್ಲಿಸಿದ್ದು, ಅತ್ಯಂತ ಖುಷಿ ತಂದಿದೆ. ವಿದ್ಯಾರ್ಥಿಗಳ ಜತೆಗೆ ಕಳೆದ ದಿನಗಳು ನೆಮ್ಮದಿ ಕೊಟ್ಟಿದೆ.  ಈ ಶೈಕ್ಷಣಿಕ ವಾತವರಣದಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಲು ಸಹಕಾರ ನೀಡಿದ ಪ್ರತಿಯೊಬ್ಬರಿಗೂ ನಾನು ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.

ಕಾಲೇಜು ಸಂಸ್ಥಾಪನಾ ಸಮಿತಿ ಅಧ್ಯಕ್ಷ ಆನಂದ್‌ ಸಿ.ಕುಂದರ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸು ದಿನ ಕೋಡಿ, ಕಾರ್ಯದರ್ಶಿ ಪ್ರಸಾದ್‌ ಬಿಲ್ಲವ, ಕಾಲೇಜು ಉಪನ್ಯಾಸಕಿ ವಾರಿಜಾ, ಕೋಟ ಮಹಿಳಾ ಮಂಡಳದ ಅಧ್ಯಕ್ಷೆ ಸುಶೀಲ ಸೋಮಶೇಖರ ಉಪಸ್ಥಿತರಿದ್ದರು.

ವಿದ್ಯಾರ್ಥಿ ಸಂಘದ ಸದಸ್ಯ ಆದರ್ಶ ಸ್ವಾಗತಿಸಿ, ಹಳೆ ವಿದ್ಯಾರ್ಥಿ  ಸಂಘದ ಸಂಚಾಲಕ  ರಂಜಿತ್‌ ಕುಮಾರ್‌ ಕಾರ್ಯಕ್ರಮ ನಿರೂಪಿದರು ಹಾಗೂ ಹಳೆ ವಿದ್ಯಾರ್ಥಿ ಸಂಘದ ಅಶೋಕ ಬಿಲ್ಲವ, ಪವನ್‌ ಕುಂದರ್‌  ಕಾರ್ಯಕ್ರಮಕ್ಕೆ ಸಹಕಾರ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next