Advertisement

Padukone: ಎಸೆಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆ  

07:56 PM Aug 31, 2023 | Team Udayavani |

ಕುಂದಾಪುರ: ಅನಾರೋಗ್ಯವೆಂದು ಕುಂದಾಪುರದ ಹಾಸ್ಟೆಲ್‌ನಿಂದ ಮನೆಗೆ ಬಂದಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.31 ರ ಬೆಳಗ್ಗೆ ಪಡುಕೋಣೆಯಲ್ಲಿ ಸಂಭವಿಸಿದೆ.

Advertisement

ಪಡುಕೋಣೆ ನಿವಾಸಿ ಪ್ರಶಾಂತ್‌ ಹಾಗೂ ಸುನಂದಾ ದಂಪತಿಯ ಪುತ್ರಿ ಸಿಂಧು (15) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಸಿಂಧು ಕುಂದಾಪುರದ ವಡೇರಹೋಬಳಿಯ ಬಾಲಕಿಯರ ವಸತಿ ನಿಲಯದಲಿದ್ದು, ವಡೇರಹೋಬಳಿಯ ಸರಕಾರಿ ಪ್ರೌಢಶಾಲೆಯ 10 ತರಗತಿ ವಿದ್ಯಾರ್ಥಿನಿ. ತಂದೆ ಪ್ರಶಾಂತ್‌ ಅವರು ಕುಂದಾಪುರ ಪುರಸಭೆಯಲ್ಲಿ ಪೌರಕಾರ್ಮಿಕರಾಗಿದ್ದಾರೆ.

ಎರಡು ದಿನದ ಹಿಂದೆ ಅನಾರೋಗ್ಯವೆಂದು ಪಡುಕೋಣೆಯ ತನ್ನ ಮನೆಗೆ ಹೋಗಿದ್ದ ಸಿಂಧುವನ್ನು ಬುಧವಾರ ತಾಯಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಬಳಿಕ ರಾತ್ರಿ ಮನೆಯಲ್ಲಿ ಚೆನ್ನಾಗಿಯೇ ಇದ್ದ ಆಕೆ, ಪಕ್ಕದ ಅಜ್ಜಿಮನೆಯಲ್ಲಿ ಟಿವಿ ನೋಡಿ ವಾಪಾಸ್ಸಾಗಿದ್ದರು. ಗುರುವಾರ ಶಾಲೆಗೆ ಬರಬೇಕಿದ್ದರಿಂದ ತಂದೆ ಕುಂದಾಪುರಕ್ಕೆ ಬಿಡುವುದಾಗಿ ಹೇಳಿದ್ದು, ಆದರೆ ಆಕೆ ತಾನು ಬಸ್ಸಿಗೆ ಹೋಗುವುದಾಗಿ ತಿಳಿಸಿದ್ದಳು. ಇದಾದ ಸ್ವಲ್ಪ ಸಮಯದ ಅನಂತರ ಮನೆಯವರು ಗಮನಿಸಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಸಿಂಧು ಮೃತದೇಹ ಪತ್ತೆಯಾಗಿದೆ. ಮೊದಲಿಗೆ ಮೃತದೇಹವನ್ನು ಕುಂದಾಪುರದ ಸರಕಾರಿ ಆಸ್ಪತ್ರೆಗೆ ಕೊಂಡೊಯ್ದಿದ್ದು, ಬಳಿಕ ಮರಣೋತ್ತರ ಪರೀಕ್ಷೆಗಾಗಿ ಮಣಿಪಾಲ ಆಸ್ಪತ್ರೆಗೆ ಪೊಲೀಸರು ಮೃತದೇಹ ರವಾನಿಸಿದ್ದಾರೆ.

ಘಟನಾ ಸ್ಥಳಕ್ಕೆ ಗಂಗೊಳ್ಳಿ ಎಸ್‌ಐ ಹರೀಶ್‌ ಆರ್‌. ಹಾಗೂ ಪೊಲೀಸ್‌ ಸಿಬಂದಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮನೆಗೆ ನಡ ಗ್ರಾ.ಪಂ. ಸದಸ್ಯರು, ಕೊರಗ ಸಂಘಟನೆಗಳ ಪ್ರಮುಖರು, ದಸಂಸ ಮುಖಂಡರು ಭೇಟಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next