Advertisement

ಪಡುವನ್ನೂರು : ಹುಲ್ಲು ತೆಗೆಯುತ್ತಿದ್ದ ವೇಳೆ ಕೆರೆಗೆ ಬಿದ್ದು ಕೃಷಿಕ ಸಾವು

05:38 PM Jul 16, 2020 | sudhir |

ಸುಳ್ಯಪದವು : ಕೆರೆಯ ಪಕ್ಕದಲ್ಲಿ ಹುಲ್ಲು ತೆಗೆಯುತ್ತಿದ್ದ ಸಂದರ್ಭ ಕಾಲು ಜಾರಿ ಕೆರೆಗೆ ಬಿದ್ದು ಕೃಷಿಕರೊಬ್ಬರು ಸಾವನ್ನಪ್ಪಿದ ಘಟನೆ ಪಡುವನ್ನೂರು ಗ್ರಾಮದ ಕೆಲಂದೂರಿನಲ್ಲಿ ಗುರುವಾರ ಸಂಭವಿಸಿದೆ.

Advertisement

ಮೃತ ದುರ್ದೈವಿ ಪಡುವನ್ನೂರು ಗ್ರಾಮದ ಕೆಲಂದೂರು ನಿವಾಸಿಯಾದ ಗಣಪತಿ ಭಟ್(56) ಎಂದು ತಿಳಿದುಬಂದಿದೆ.
ಕೃಷಿಕರಾದ ಗಣಪತಿ ಭಟ್ ಅವರು ಎಂದಿನಂತೆ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ಸಂದರ್ಭ ಕೆರೆಯ ಅಂಚಿನಲ್ಲಿ ಹುಲ್ಲು ತೆಗೆಯಲು ಹೋಗಿದ್ದಾರೆ ಅವಾಗ ಕಾಲುಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಸಂಪ್ಯ ಪೊಲೀಸ್ ಠಾಣೆಯ ಉಪನಿರೀಕ್ಷಕ ಉದಯರವಿ, ಈಶ್ವರಮಂಗಲ ಪೊಲೀಸ್ ಹೊರ ಠಾಣೆಯ ನಾರಾಯಣ ಗೌಡ ಹಾಗೂ ಸಿಬ್ಬಂದಿಗಳು ಭೇಟಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next