Advertisement

Aranthodu ಪೈಂಬೆಚ್ಚಾಲು ಸರಕಾರಿ ಶಾಲೆಯ ಸಾಮಗ್ರಿಗಳಿಗೆ ಹಾನಿ

10:58 PM Oct 25, 2023 | Team Udayavani |

ಅರಂತೋಡು:ಆಲೆಟ್ಟಿ ಗ್ರಾಮದ ಪೈಂಬೆಚ್ಚಾಲು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ತಡ ರಾತ್ರಿ ಕಿಡಿಗೇಡಿಗಳು ಸಲಾಕೆ ಬಳಸಿ ಕಿಟಕಿ ಮೂಲಕ ಕಚೇರಿಯಲ್ಲಿರುವ ಪುಸ್ತಕ ಇನ್ನಿತರ ವಸ್ತುಗಳನ್ನು ಹಾನಿಗೊಳಿಸಿರುವ ಘಟನೆ ವರದಿಯಾಗಿದೆ.

Advertisement

ಕಿಡಿಗೇಡಿಗಳು ನೀರಿನ ಟ್ಯಾಂಕ್‌ ಮೂಲಕ ಕಿಟಕಿ ತೆರೆದು ಸಲಾಕೆಯಿಂದ ಮೇಜಿನ ಮೇಲೆ ಇದ್ದ ಪುಸ್ತಕಗಳನ್ನು ಎಳೆದು ಹಾಕಿ ಚೆಲ್ಲಾಪಿಲ್ಲಿ ಮಾಡಿದ್ದಾರೆ. ಬುಧವಾರ ಬೆಳಗ್ಗೆ ಶಿಕ್ಷಕರು ಬಾಗಿಲು ತೆಗೆಯುವ ಸಂದರ್ಭ ಈ ಘಟನೆ ಬೆಳಕಿಗೆ ಬಂದಿದೆ. ಯಾವುದೇ ವಸ್ತುಗಳು ಕಳ್ಳತನವಾಗಿಲ್ಲವೆಂದು ತಿಳಿದು ಬಂದಿದೆ.

ಶಾಲೆಯ ಎಸ್‌ಡಿಎಂಸಿ ಹಾಗೂ ಸ್ಥಳೀಯ ಪಂಚಾಯತ್‌ ಸದಸ್ಯರಿಗೆ ವಿಷಯ ತಿಳಿಸಲಾಯಿತು. ಸ್ಥಳಕ್ಕೆ ಆಗಮಿಸಿದ ಪಂಚಾಯತ್‌ ಸದಸ್ಯರಾದ ಗೀತಾ ಕೋಲ್ಚಾರ್‌, ಧರ್ಮಪಾಲ ಕೊಯಿಂಗಾಜೆ ಹಾಗೂ ಎಸ್‌ಡಿಎಂಸಿ ಅಧ್ಯಕ್ಷ ಅಬ್ದುಲ್‌ ಫೈಝಿ ಅವರು ಸುಳ್ಯ ಪೋಲಿಸರಿಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೋಲೀಸರು ಪರಿಶೀಲನೆ ನಡೆಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next