Advertisement

ಪಾಕಿಸ್ತಾನ: ಕಾಶ್ಮೀರ ಪರ Rally ಮೇಲೆ ಗ್ರೆನೇಡ್ ದಾಳಿ- 30 ಜನರಿಗೆ ಗಾಯ

09:29 AM Aug 06, 2020 | Nagendra Trasi |

ಇಸ್ಲಾಮಾಬಾದ್:ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಪಡಿಸಿದ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕಾಶ್ಮೀರ ಪ್ರತ್ಯೇಕತೆ ಪರ ನಡೆಸಿದ ರಾಲಿ ಮೇಲೆ ಗ್ರೆನೇಡ್ ದಾಳಿ ನಡೆದ ಘಟನೆ ಕಾಶ್ಮೀರದಲ್ಲಿ ನಡೆದಿದ್ದು, 30 ಜನರು ಗಾಯಗೊಂಡಿರುವುದಾಗಿ ವರದಿ ತಿಳಿಸಿದೆ.

Advertisement

ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ತೆರವುಗೊಳಿಸಿದ್ದನ್ನು ವಿರೋಧಿಸಿ ಜಮಾತ್ ಎ ಇಸ್ಲಾಮಿ ರಾಲಿ ನಡೆಸಿದ ವೇಳೆ ಗ್ರೆನೇಡ್ ದಾಳಿ ನಡೆದಿದ್ದು, ಘಟನೆಯಲ್ಲಿ 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಇವರನ್ನೆಲ್ಲಾ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ದಾಳಿಯ ಹೊಣೆಯನ್ನು ಸಿಂಧುದೇಶ್ ರೆವೊಲ್ಯೂಶನರಿ ಆರ್ಮಿ ಹೊತ್ತುಕೊಂಡಿದೆ. ಜೂನ್ ತಿಂಗಳಿನಲ್ಲಿ ಇಬ್ಬರು ಯೋಧರು ಸೇರಿದಂತೆ ನಾಲ್ವರನ್ನು ಸರಣಿ ಸ್ಫೋಟ ನಡೆಸಿ ಹತ್ಯೆಗೈದಿರುವ ಘಟನೆಯ ಹೊಣೆಯನ್ನು ಎಸ್ ಆರ್ ಎ ಹೊತ್ತುಕೊಂಡಿರುವುದಾಗಿ ವರದಿ ವಿವರಿಸಿದೆ.

ಪ್ರತ್ಯೇಕ ಸಿಂಧ್ ಪ್ರಾಂತ್ಯಕ್ಕಾಗಿ ಎಸ್ ಆರ್ ಎ ಹೋರಾಟ ನಡೆಸುತ್ತಿದೆ. ಪಾಕಿಸ್ತಾನದಿಂದ ಪ್ರತ್ಯೇಕಗೊಳ್ಳಬೇಕು ಎಂದು ತಿಳಿಸಿದೆ. ಅಲ್ಲದೇ ಬಲೂಚಿಸ್ತಾನ್ ಲಿಬರೇಷನ್ ಆರ್ಮಿ ಜತೆ ಹೊಂದಾಣಿಕೆ ಮಾಡಿಕೊಳ್ಳುವುದಾಗಿ ಹೇಳಿದೆ.

2019ರ ಆಗಸ್ಟ್ 5ರಂದು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿತ್ತು. ಅಲ್ಲದೇ ಜಮ್ಮು-ಕಾಶ್ಮೀರ ಮತ್ತು ಲಡಾಖ್ ಅನ್ನು ಪ್ರತ್ಯೇಕಗೊಳಿಸಿ ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next