Advertisement

ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್ ; ಓರ್ವ ನಾಗರಿಕ ಸಾವು

09:53 AM Nov 01, 2019 | Team Udayavani |

ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿರುವ ಗಡಿ ನಿಯಂತ್ರಣ ರೇಖೆ ಪ್ರದೇಶದಲ್ಲಿ ಪಾಕಿಸ್ಥಾನ ಸೈನ್ಯ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದ ಪರಿಣಾಮ ಒಬ್ಬ ನಾಗರಿಕ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Advertisement

ಬುಧವಾರ ಬೆಳಿಗ್ಗೆ ಈ ಅಪ್ರಚೋದಿತ ಗುಂಡಿನ ದಾಳಿ ನಡೆದಿರುವ ಕುರಿತಾಗಿ ಮಾಹಿತಿ ಲಭ್ಯವಾಗಿದೆ. ಘಟನೆಯಲ್ಲಿ ಇನ್ನೂ ಏಳು ಜನರು ಗಾಯಗೊಂಡಿದ್ದಾರೆ.

ಮಂಗಳವಾರ ಅನ್ಯರಾಜ್ಯದ ಕಟ್ಟಡ ಕಾರ್ಮಿಕರನ್ನು ಗುರಿಯಾಗಿಸಿ ಪಾಕಿಸ್ಥಾನ ಬೆಂಬಲಿತ ಉಗ್ರರು ನಡೆಸಿದ್ದ ಗುಂಡಿನ ದಾಳಿಯಲ್ಲಿ ಐವರು ಮೃತಪಟ್ಟಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next