Advertisement

ಜಾಧವ್ ಎರಡನೇ ಬಾರಿ ಕಾನ್ಸುಲರ್ ಭೇಟಿಗೆ ಅವಕಾಶವಿಲ್ಲ; ಭಾರತಕ್ಕೆ ಪಾಕ್

09:35 AM Sep 13, 2019 | Team Udayavani |

ಇಸ್ಲಾಮಾಬಾದ್: ಜಮ್ಮು-ಕಾಶ್ಮೀರದ ವಿಚಾರವಾಗಿ ವಿಶ್ವಸಂಸ್ಥೆಯಲ್ಲಿ ಮತ್ತೆ ಮುಖಭಂಗಕ್ಕೀಡಾಗಿರುವ ಪಾಕಿಸ್ತಾನ ಇದೀಗ ಗೂಢಚಾರದ ಆರೋಪದಡಿ ಪಾಕಿಸ್ತಾನದಲ್ಲಿ ಬಂಧಿಯಾಗಿರುವ ಕುಲಭೂಷಣ್ ಜಾಧವ್ ವಿಚಾರದಲ್ಲಿ ಭಾರತಕ್ಕೆ ಎರಡನೇ ಬಾರಿ ರಾಜತಾಂತ್ರಿಕ ನೆರವಿನ ಅವಕಾಶ ನೀಡುವುದಿಲ್ಲ ಎಂದು ಗುರುವಾರ ತಿಳಿಸಿದೆ.

Advertisement

ಗೂಢಚಾರದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಕುಲಭೂಷಣ್ ಜಾಧವ್ ಗೆ ಪಾಕಿಸ್ತಾನದ ಮಿಲಿಟರಿ ಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿತ್ತು. ಆದರೆ ಪ್ರಕರಣ ಅಂತಾರಾಷ್ಟ್ರೀಯ ಕೋರ್ಟ್ ಮೆಟ್ಟಿಲೇರಿದ್ದರಿಂದ ಗಲ್ಲುಶಿಕ್ಷೆಯನ್ನು ತಡೆಹಿಡಿಯುವಂತೆ ಸೂಚಿಸಿ, ರಾಜತಾಂತ್ರಿಕ ನೆರವು ಕಲ್ಪಿಸಿಕೊಡುವಂತೆ ತೀರ್ಪು ನೀಡಿತ್ತು.

ಜಾಧವ್ ಗೆ 2ನೇ ಬಾರಿ ರಾಜತಾಂತ್ರಿಕ ನೆರವು ಕಲ್ಪಿಸಿಕೊಡುವುದಿಲ್ಲ ಎಂದು ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಮೊಹಮ್ಮದ್ ಫೈಸಲ್ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದೆ.

ವಿಯೆನ್ನಾ ಒಪ್ಪಂದದ ಪ್ರಕಾರ ಗಲ್ಲುಶಿಕ್ಷೆಗೊಳಗಾಗಿರುವ ಕುಲಭೂಷಣ್ ಜಾಧವ್ ಗೆ ಎರಡನೇ ಬಾರಿ ರಾಜತಾಂತ್ರಿಕ ನೆರವಿನ ಅವಕಾಶ ಕೊಡುವುದಿಲ್ಲ ಎಂದು ಹೇಳುವ ಮೂಲಕ ಪಾಕಿಸ್ತಾನ ಮತ್ತೆ ತನ್ನ ಹಳೆ ನೀತಿಯನ್ನೇ ಮುಂದುವರಿಸಿದಂತಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next