Advertisement

ಧ್ವಂಸ ಮಾಡಿದ್ದೇವೆ ಅಂತ ಬಡಾಯಿ ಕೊಚ್ಚಿಕೊಳ್ಬೇಡಿ; ಭಾರತಕ್ಕೆ ಪಾಕ್!

05:19 PM May 23, 2017 | Team Udayavani |

ಇಸ್ಲಾಮಾಬಾದ್:ಗಡಿಭಾಗದಲ್ಲಿರುವ ಪಾಕಿಸ್ತಾನದ ಸೇನಾ ನೆಲೆಗಳನ್ನು ಭಾರತೀಯ ಸೇನಾ ಪಡೆ ಧ್ವಂಸಗೊಳಿಸಿರುವುದಾಗಿ ತಿಳಿಸಿದ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಪಾಕಿಸ್ತಾನ, ಭಾರತೀಯ ಸೇನೆ ನಮ್ಮ ನೆಲೆ ಮೇಲೆ ದಾಳಿ ನಡೆಸಿಲ್ಲ. ಹಾಗಾಗಿ ಈ ವಿಚಾರದಲ್ಲಿ ಸುಮ್ಮನೆ ಜಂಬ ಕೊಚ್ಚಿಕೊಳ್ಳುವುದು ಬೇಡ ಎಂದು ತಿರುಗೇಟು ನೀಡಿದೆ.

Advertisement

ಜಮ್ಮು ಕಾಶ್ಮೀರದ ನೌಶೇರಾ ಸೆಕ್ಟರ್ ನಿಂದ ಪಾಕಿಸ್ತಾನದ ಸೇನಾ ನೆಲೆಗಳನ್ನು ಧ್ವಂಸಗೊಳಿಸಲಾಗಿದೆ ಎಂಬ ಹೇಳಿಕೆಯನ್ನು ನವದೆಹಲಿಯಲ್ಲಿರುವ ಪಾಕಿಸ್ತಾನದ ಹೈಕಮೀಷನರ್ ಅಬ್ದುಲ್ ಬಾಸಿತ್ ತಳ್ಳಿಹಾಕಿದ್ದು, ಪಾಕಿಸ್ತಾನ ಸರ್ಕಾರದಿಂದ ಇಂತಹ ಯಾವುದೇ ವರದಿ ಈವರೆಗೂ ಬಂದಿಲ್ಲ. ಹಾಗಾಗಿ ಈ ವಿಷಯದಲ್ಲಿ ಬಡಾಯಿ ಕೊಚ್ಚಿಕೊಳ್ಳಬೇಕಾದ ಅಗತ್ಯವಿಲ್ಲ ಎಂದು ಸಿಎನ್ಎನ್ ನ್ಯೂಸ್ 18 ಜೊತೆ ಮಾತನಾಡುತ್ತ ತಿಳಿಸಿದ್ದಾರೆ.

ಜಮ್ಮು ಕಾಶ್ಮೀರದ ನೌಶೇರಾ ಸೆಕ್ಟರ್ ನಿಂದ ಗ್ರೇನೆಡ್ ದಾಳಿ ನಡೆಸಿ ಗಡಿಭಾಗದಲ್ಲಿರುವ ಪಾಕ್ ಸೇನಾ ನೆಲೆಗಳನ್ನು ಧ್ವಂಸಗೊಳಿಸಿರುವ ಮಾಹಿತಿಯನ್ನು ಭಾರತೀಯ ಸೇನಾ ಪಡೆ ಬಹಿರಂಗಗೊಳಿಸಿ, ದಾಳಿಯ ವಿಡಿಯೋವನ್ನು ಬಿಡುಗಡೆ ಮಾಡಿತ್ತು. 

Advertisement

Udayavani is now on Telegram. Click here to join our channel and stay updated with the latest news.

Next