Advertisement

ಪಾಕ್ ಐಸಿಯುನಲ್ಲಿದೆ, ಮೊದಲು ನಿಮ್ಮ ಸಮಸ್ಯೆ ಬಗೆಹರಿಸಿಕೊಳ್ಳಿ; ಶಿವಸೇನಾ ಮುಖವಾಣಿ ಸಾಮ್ನಾ

10:06 AM Aug 20, 2019 | Nagendra Trasi |

ಮುಂಬೈ:ತನ್ನದೇ ಸಮಸ್ಯೆಗಳಿಂದ ಬಳಲುತ್ತಿರುವ ಪಾಕಿಸ್ತಾನ ಈಗಾಗಲೇ “ತುರ್ತು ನಿಗಾ ಘಟಕ”(ಐಸಿಯು)ದಲ್ಲಿದೆ. ಹೀಗಾಗಿ ಪ್ರಧಾನಿ ಇಮ್ರಾನ್ ಖಾನ್ ಕಾಶ್ಮೀರದ ವಿಚಾರದಲ್ಲಿ ಮೂಗು ತೂರಿಸುವ ಮೊದಲು ಪಾಕಿಸ್ತಾನದ ಸಮಸ್ಯೆಗಳ ಬಗ್ಗೆ ಗಮನಹರಿಸಲಿ ಎಂದು ಶಿವಸೇನಾದ ಮುಖವಾಣಿ ಸಾಮ್ನಾ ಸಂಪಾದಕೀಯದಲ್ಲಿ ತಿಳಿಸಿದೆ.

Advertisement

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿರುವ 370ನೇ ವಿಧಿಯನ್ನು ರದ್ದುಗೊಳಿಸಿದ ವಿಚಾರದಲ್ಲಿ ಪಾಕಿಸ್ತಾನದ ಜಟಾಪಟಿ ಕುರಿತಂತೆ ಶಿವಸೇನಾದ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಕಟುವಾಗಿ ಟೀಕಿಸಲಾಗಿದೆ.

ಜಮ್ಮು-ಕಾಶ್ಮೀರದ ವಿಚಾರದಲ್ಲಿ ಪಾಕಿಸ್ತಾನ ಮತ್ತು ಚೀನಾ ವಿಶ್ವಸಂಸ್ಥೆಯಲ್ಲಿ(ಯುಎನ್ ಎಸ್ ಸಿ) ನಡೆದ ರಹಸ್ಯ ಸಭೆಯಲ್ಲಿಯೂ ಮುಖಭಂಗ ಅನುಭವಿಸಿದೆ ಎಂದು ಸಂಪಾದಕೀಯ ವ್ಯಂಗ್ಯವಾಡಿದೆ.

ವಿಶೇಷ ಸ್ಥಾನಮಾನ ರದ್ದು ಮಾಡಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತ ಸರಕಾರದ ನಿರ್ಧಾರಕ್ಕೆ ವಿಶ್ವಸಂಸ್ಥೆಯಲ್ಲಿ ಹಲವು ರಾಷ್ಟ್ರಗಳು ಬೆಂಬಲ ವ್ಯಕ್ತಪಡಿಸಿರುವುದಾಗಿಯೂ ಸಂಪಾದಕೀಯದಲ್ಲಿ ವಿವರಿಸಿ, ಪಾಕಿಸ್ತಾನ ಮೊದಲು ತನ್ನ ದೇಶದ ಸಮಸ್ಯೆ ಬಗೆಹರಿಸಿಕೊಳ್ಳಲಿ ಎಂದು ಸಲಹೆ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next