Advertisement

ಇಮ್ರಾನ್‌ ಖಾನ್‌ ವಿವಾದ

06:50 AM Dec 23, 2018 | Team Udayavani |

ಲಾಹೋರ್‌: “ಅಲ್ಪಸಂಖ್ಯಾತರನ್ನು ಹೇಗೆ ನಡೆಸಿಕೊಳ್ಳಬೇಕು ಎಂಬುದನ್ನು ನರೇಂದ್ರ ಮೋದಿ ಸರಕಾರಕ್ಕೆ ನಾನು ತೋರಿ  ಸಿಕೊಡುತ್ತೇನೆ’ ಎಂದು ಹೇಳುವ ಮೂಲಕ ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌ ಹೊಸ ವಿವಾದ ಸೃಷ್ಟಿಸಿದ್ದಾರೆ. 

Advertisement

ಬುಲಂದ್‌ಶಹರ್‌ ಘಟನೆ ಕುರಿತು ನಟ ನಾಸಿರುದ್ದೀನ್‌ ಶಾ ಹೇಳಿಕೆ ವಿವಾದವಾದ ಬೆನ್ನಲ್ಲೇ ಖಾನ್‌ ಈ ಹೇಳಿಕೆ ನೀಡಿದ್ದಾರೆ. ಲಾಹೋರ್‌ನಲ್ಲಿ ಮಾತನಾಡಿದ ಖಾನ್‌, ನಮ್ಮ ಸರಕಾರವು ಧಾರ್ಮಿಕ ಅಲ್ಪಸಂಖ್ಯಾತರ ಅನುಕೂಲಕ್ಕಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಭಾರತದಲ್ಲಿ ಅಲ್ಪಸಂಖ್ಯಾತರನ್ನು ಸಮಾನ ನಾಗರಿಕರನ್ನಾಗಿ ನೋಡಲಾ ಗುತ್ತಿಲ್ಲ. ಅವರನ್ನು ಹೇಗೆ ನಡೆಸಿಕೊಳ್ಳಬೇಕೆಂದು ಮೋದಿ ಸರಕಾರಕ್ಕೆ ನಾನು ತೋರಿಸಿಕೊಡುತ್ತೇನೆ ಎಂದಿದ್ದಾರೆ.
 

Advertisement

Udayavani is now on Telegram. Click here to join our channel and stay updated with the latest news.

Next