Advertisement

ಮತ್ತೆ ಕಾಶ್ಮೀರ ವಿವಾದ ಕೆದಕಿದ ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಫ್

09:32 PM Aug 19, 2022 | Team Udayavani |

ಇಸ್ಲಾಮಾಬಾದ್‌: ಪಾಕಿಸ್ತಾನದ ಪ್ರಧಾನಿ ಶೆಹಬಾಜ್‌ ಷರೀಫ್ ಅವರಿಗೆ ಭಾರತದ ಜತೆಗೆ ಉತ್ತಮ ಬಾಂಧವ್ಯ ಬೇಕಂತೆ; ಆದರೆ, ಅವರಿಗೆ ಕಾಶ್ಮೀರ ಸಮಸ್ಯೆ ಪರಿಹಾರವಾಗಬೇಕಂತೆ!ಇಂಥ ಒಂದು ಹೊರ ವರಸೆಯನ್ನು ಅವರು ಹರಿಯಬಿಟ್ಟಿದ್ದಾರೆ.

Advertisement

“ಸಮಾತನೆ, ನ್ಯಾಯ ಮತ್ತು ಪರಸ್ಪರ ಗೌರವ’ದ ಆಧಾರದಲ್ಲಿ ಭಾರತ ಸರ್ಕಾರದ ಜತೆಗೆ ಉತ್ತಮ ಹಾಗೂ ಶಾಂತಿಯುತ ಬಾಂಧವ್ಯ ಹೊಂದಲು ಪಾಕಿಸ್ತಾನ ಬಯಸಿದೆ. ದಕ್ಷಿಣ ಏಷ್ಯಾ ವ್ಯಾಪ್ತಿಯಲ್ಲಿ ಸ್ಥಿರ ಶಾಂತಿ ನೆಮ್ಮದಿ ಕಾಯ್ದುಕೊಂಡು ಬರಲು ಅಂತಾರಾಷ್ಟ್ರೀಯ ಸಮುದಾಯ ಮುಂದಾಗಬೇಕು ಎಂದು ಪ್ರತಿಪಾದಿಸಿದ್ದಾರೆ.

ಅವರು ಹೀಗೆ ಹೇಳುವ ಮೂಲಕ ಕಾಶ್ಮೀರ ವಿಚಾರ ಬಗೆಹರಿಸಲು ಮಧ್ಯಪ್ರವೇಶ ಮಾಡಬೇಕು ಎಂದೂ ಪರೋಕ್ಷವಾಗಿ ಮನವಿ ಮಾಡಿದ್ದಾರೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಕೈಗೊಳ್ಳಲಾಗಿರುವ ನಿರ್ಣಯದಂತೆ ಕಾಶ್ಮೀರ ವಿವಾದವನ್ನೂ ಪರಿಹರಿಸಬೇಕು. ಅದಕ್ಕಾಗಿ ಅಂತಾರಾಷ್ಟ್ರೀಯ ಸಮುದಾಯ ಮಧ್ಯಪ್ರವೇಶ ಮಾಡಬೇಕು ಎಂದೂ ಒತ್ತಾಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next