Advertisement

ಜಮ್ಮು-ಕಾಶ್ಮೀರ: ಪೂಂಚ್ ಜಿಲ್ಲೆ ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘಿಸಿ ಪಾಕ್ ದಾಳಿ

08:06 AM Apr 30, 2020 | Nagendra Trasi |

ನವದೆಹಲಿ/ಇಸ್ಲಾಮಾಬಾದ್: ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಪಾಕಿಸ್ತಾನ ಸೇನೆ ಬುಧವಾರ ಮತ್ತೆ ಕದನ ವಿರಾಮ ಉಲ್ಲಂಘಿಸಿ ನಿರಂತರವಾಗಿ ಗುಂಡಿನ ದಾಳಿ ನಡೆಸಿರುವುದಾಗಿ ವರದಿ ತಿಳಿಸಿದೆ. ಭಾರತೀಯ ಸೇನೆ ಪಾಕ್ ಸೇನೆ ದಾಳಿಗೆ ತಕ್ಕ ಪ್ರತಿದಾಳಿ ನಡೆಸಿದೆ.

Advertisement

ಪಾಕಿಸ್ತಾನ ಸೇನೆ ಶಾಪುರ್ ಮತ್ತು ಕಿರ್ನಿ ಸೆಕ್ಟರ್ ಪ್ರದೇಶದ ಗಡಿ ನಿಯಂತ್ರಣ ರೇಖೆ ಬಳಿ ಶೆಲ್ಲಿಂಗ್ ಮತ್ತು ಮೋರ್ಟಾರ್ಸ್ ಬಳಸಿ ದಾಳಿ ನಡೆಸಿರುವುದಾಗಿ ವರದಿ ವಿವರಿಸಿದೆ.

ಕೋವಿಡ್ 19 ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದು, ಮತ್ತೊಂದೆಡೆ ಗಡಿಪ್ರದೇಶದಲ್ಲಿ ಪಾಕಿಸ್ತಾನ ನಿರಂತರವಾಗಿ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸುತ್ತಿದೆ ಎಂದು ಭಾರತೀಯ ಸೇನೆ ಆರೋಪಿಸಿತ್ತು.

ಇತ್ತೀಚೆಗೆ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತದ ಗಡಿ ನಿಯಂತ್ರಣ ರೇಖೆ ಪ್ರದೇಶವನ್ನು ಗುರಿಯಾಗಿರಿಸಿಕೊಂಡು ಉಗ್ರರು ಅಡಗಿಕೊಂಡಿದ್ದ ಶಿಬಿರದ ಮೇಲೆ ಭಾರತೀಯ ಸೇನೆ ಏಕಾಏಕಿ ದಾಳಿ ನಡೆಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next