Advertisement

ಪಾಕಿಸ್ಥಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ

04:06 AM Feb 28, 2019 | |

ಶ್ರೀನಗರ: ಗಡಿ ಪ್ರದೇಶದಲ್ಲಿ ಪಾಕಿಸ್ಥಾನ ಮತ್ತೆ ತನ್ನ ಉದ್ಧಟತನ ಮೆರೆದಿದೆ. ಗುರುವಾರ ಬೆಳಗ್ಗೆ ಆರು ಗಂಟೆ ಸುಮಾರಿಗೆ ಪೂಂಛ್ ಪ್ರದೇಶದಲ್ಲಿ ಮತ್ತೆ ಕದನ ವಿರಾಮ ಉಲ್ಲಂಘಿಸಿದೆ.

Advertisement

ಕಾಶ್ಮೀರದ ಪೂಂಛ್ ಜಿಲ್ಲೆಯ ಕೃಷ್ಣಾ ಘಾಟಿ ಎಂಬಲ್ಲಿ ಪಾಕ್ ಸೈನಿಕರು ಭಾರತದ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಭಾರತದ ಸೈನಿಕರು ಪ್ರತಿರೋಧ ತೋರಿದ್ದು, ಯಾವುದೇ ಹಾನಿಯ ಬಗ್ಗೆ ವರದಿಯಾಗಿಲ್ಲ. 

ಬೆಳಗ್ಗೆ ಸುಮಾರು ಆರು ಗಂಟೆಯ ಸುಮಾರಿಗೆ ಗಡಿ ನಿಯಂತ್ರಣ ರೇಖೆಯ ಬಳಿ ಪಾಕಿಸ್ಥಾನದಿಂದ ಅಪ್ರಚೋದಿತ ಗುಂಡಿನ ದಾಳಿ ನಡೆದಿದೆ ಎಂದು ರಕ್ಷಣಾ ವಕ್ತಾರ ಲೆಫ್ಟಿನೆಂಟ್ ಕರ್ನಲ್ ದೇವೆಂದ್ರ ಆನಂದ್ ಹೇಳಿದ್ದಾರೆ. 

ಪೂಂಛ್, ರಜೌರಿ, ಸಾಂಬಾ ಜಿಲ್ಲೆ, ಗಡಿ ನಿಯಂತ್ರಣಾ ರೇಖೆಯ ಸುತ್ತಲಿನ ಐದು ಕಿ.ಮೀ ಅಂತರದ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಲಾಗಿದೆ. 

Advertisement
Advertisement

Udayavani is now on Telegram. Click here to join our channel and stay updated with the latest news.

Next