Advertisement

PakistanZindabad ಘೋಷಣೆ;ಉಡುಪಿ,ಮಂಗಳೂರಿನಲ್ಲಿ ಕಾಂಗ್ರೆಸ್ ಕಚೇರಿ ಮುತ್ತಿಗೆಗೆ ಬಿಜೆಪಿಯತ್ನ

12:39 PM Feb 28, 2024 | Team Udayavani |

ಉಡುಪಿ/ಮಂಗಳೂರು: ವಿಧಾನಸೌಧದಲ್ಲಿ ಪಾಕಿಸ್ಥಾನ ಜಿಂದಾಬಾದ್ ಘೋಷಣೆ ಕೂಗಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದ  ವತಿಯಿಂದ ಶಾಸಕ ಯಶಪಾಲ್ ಸುವರ್ಣ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಕಚೇರಿ ಮುತ್ತಿಗೆ ಯತ್ನ ನಡೆಯಿತು.

Advertisement

ಬ್ರಹ್ಮಗಿರಿ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ತಡೆದ ಹಿನ್ನೆಲೆ ರಸ್ತೆಯ ಮೇಲೆ ಕುಳಿತು ಪ್ರತಿಭಟನೆ ಮುಂದುವರಿಸಿದರು. ಪೊಲೀಸರ ಬಿಗಿ ಬಂದೋಬಸ್ತ್ ನಲ್ಲಿ ಕಾಂಗ್ರೆಸ್ ಕಚೇರಿ ಮುತ್ತಿಗೆಗೆ ಯತ್ನಿಸಿದವರನ್ನು ಪೊಲೀಸರು ಬಂಧಿಸಿ, ಅನಂತರ ಬಿಡುಗಡೆ ಮಾಡಿದರು.

ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಮುಖಂಡರಾದ ರಾಜೇಶ್ ಕಾವೇರಿ, ವೀಣಾ ಶೆಟ್ಟಿ, ಮುಟ್ಲುಪಾಡಿ ಸತೀಶ್ ಶೆಟ್ಟಿ, ಬಿಜೆಪಿ ಯುವ ಮೋರ್ಚಾ ಮುಖಂಡರಾದ ಪ್ರಖ್ಯಾತ್ ಶೆಟ್ಟಿ ಮೊದಲಾದವರು ಭಾಗವಹಿಸಿದ್ದರು.

Advertisement

ಬಿಜೆಪಿಯ ದ.ಕ. ಜಿಲ್ಲಾ ಯುವ ಮೋರ್ಚಾ ಕಾರ್ಯಕರ್ತರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ಮೋರ್ಚಾ ಕಾರ್ಯಕರ್ತರು ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗುತ್ತಾ ಮಲ್ಲಿಕಟ್ಟೆಯಲ್ಲಿರುವ ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

ಈ ಸಂದರ್ಭದಲ್ಲಿ ಪೊಲೀಸರು ಅವರನ್ನು ವಶಕ್ಕೆ ಪಡೆದು ಕರೆದೊಯ್ದರು.

 

Advertisement

Udayavani is now on Telegram. Click here to join our channel and stay updated with the latest news.

Next