Advertisement

ಕುಂದಾಪುರದಲ್ಲೂ ಪಾಕಿಸ್ಥಾನ್ ಜಿಂದಾಬಾದ್ ಘೋಷಣೆ: ಓರ್ವನ ಬಂಧನ

09:49 AM Mar 03, 2020 | keerthan |

ಕುಂದಾಪುರ: ಇಲ್ಲಿನ ಮಿನಿ ವಿಧಾನ ಸೌಧದಲ್ಲಿ ವ್ಯಕ್ತಿಯೋರ್ವ ಪಾಕಿಸ್ಥಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಘಟನೆ ಸೋಮವಾರ ನಡೆದಿದೆ. ಕೂಡಲೇ ಪೊಲೀಸರು ಆತನನ್ನು ಬಂಧಿಸಿದ್ದಾರೆ.

Advertisement

ಕೋಡಿ ಬಿವಾಸಿ ರಾಘವೇಂದ್ರ ಗಾಣಿಗ (43) ಘೋಷಣೆ ಕೂಗಿದ ವ್ಯಕ್ತಿ.

ಇಂದು ಬೆಳಿಗ್ಗೆ ಈತ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ಪಾಕಿಸ್ಥಾನ ಜಿಂದಾಬಾದ್ ಎಂದು ಘೋಷಣೆ ಕೂಗುತ್ತಿದ್ದ. ಈ ಬಗ್ಗೆ ತಹಶೀಲ್ದಾರ್ ದೂರು ನೀಡಿದ್ದು, ಎಸ್ ಐ ಹರೀಶ್ ಆರ್ ನಾಯ್ಕ್ ತಕ್ಷಣ ಆರೋಪಿಯನ್ನು ಬಂಧಿಸಿದ್ದು, ದೇಶದ್ರೋಹ ಪ್ರಕರಣ ದಾಖಲಾಗಿದೆ.

ಆರೋಪಿಯನ್ನು ಠಾಣೆಯಲ್ಲಿ ವಿಚಾರಣೆ ನಡೆಸುತ್ತಿದ್ದು, ವಿಷಯ ತಿಳಿದ ಜನರು ಠಾಣೆಯತ್ತ ಧಾವಿಸುತ್ತಿದ್ದು, ಪೊಲೀಸರು ಜನರನ್ನು ಚದುರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next