Advertisement

ಪಾಕಿಸ್ತಾನ್‌ ಪರ ಘೋಷಣೆ ಕೂಗುವವರಿಗೆ ಗುಂಡಿಕ್ಕಿ: ಅಂಗಡಿ

07:00 AM Dec 15, 2017 | Team Udayavani |

ಬೆಳಗಾವಿ: ನಮ್ಮಲ್ಲಿದ್ದುಕೊಂಡು ಪಾಕಿಸ್ತಾನ ಜಿಂದಾಬಾದ್‌ ಎಂದು ಘೋಷಣೆ ಕೂಗುವವರನ್ನು ಮೊದಲು ಗುಂಡಿಟ್ಟು ಕೊಲ್ಲಬೇಕೆಂದು ಸಂಸದ ಸುರೇಶ ಅಂಗಡಿ ಹೇಳಿದರು. 

Advertisement

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷ ಮತಗಳ ಆಸೆಗಾಗಿ ಬಿಹಾರ, ಉತ್ತರ ಪ್ರದೇಶ ಸೇರಿ ಅನ್ಯ ರಾಜ್ಯಗಳಲ್ಲಿನ ಅಲ್ಪಸಂಖ್ಯಾತರಿಗೆ ಮತ್ತು ಬಾಂಗ್ಲಾ ವಲಸಿಗರಿಗೆ ಕರ್ನಾಟಕವನ್ನು ವಸತಿ ನಿಲಯವನ್ನಾಗಿ ಮಾಡುತ್ತಿದೆ. ಇದಕ್ಕೆ ಬೆಳಗಾವಿಯಲ್ಲಿ ಹೆಚ್ಚುತ್ತಿರುವ ಅಕ್ರಮ ಬಡಾವಣೆಗಳೇ ಸಾಕ್ಷಿ. ಕರ್ನಾಟಕದಲ್ಲಿ ಕಾಂಗ್ರೆಸ್‌ ಉಸ್ತುವಾರಿಯಾಗಿ ವೇಣುಗೋಪಾಲ್‌ ಬಂದ ಮೇಲೆ ಕೇರಳದಲ್ಲಿ ನಡೆಯುವಂತೆ ದೇಶದ್ರೋಹಿ ಘೋಷಣೆಗಳು ಹೆಚ್ಚಾಗಿವೆ. 

ಕಾಂಗ್ರೆಸ್‌ ಕೊಲೆ ಮತ್ತು ದರೋಡೆ ಮಾಡುವ ಪಕ್ಷವಾಗಿ ಬದಲಾಗಿದೆ. ಹಿಂದೂಗಳ ಮೇಲಿನ ದಾಳಿಯ ಪ್ರಮಾಣ ಕೂಡ ಹೆಚ್ಚಾಗಿದೆ. ರಾಜ್ಯದಲ್ಲಿರುವ ಗುಪ್ತಚರ ಇಲಾಖೆ ಸರ್ಕಾರದ ಕೈಗೊಂಬೆಯಂತೆ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next